Home / ಕವನ / ಕವಿತೆ / ಹೊಸಬರು

ಹೊಸಬರು

ಈ ಕೊಳ ಯಾಕೆ ಕೊಳಚೆಯಾಗಿದೆ?  ಎಂಜಲನ್ನ
ಯಾಕೆ ಬೀದಿಗೆಸೆಯುತ್ತೀರಿ?  ಇದೇನು ದೇವಸ್ಥಾನದ
ಮುಂದೆ ಮೂಗಿಗೆ ಹಿಡಿಯುವ ಘಾಟು?  ಅಚೀಚೆ
ಉಗಿಯುತ್ತ ಹೋಗುವ ಆ ಅವರು ಯಾರು?  ಇದು
ಬಸ್ಸು ನಿಲ್ದಾಣವೆ ಅಥವ… ಎಂಬಿತ್ಯಾದಿಯಾಗಿ ನೀವು
ಕೇಳಲಿ, ಕೇಳದೆ ಇರಲಿ, ನಿಮ್ಮ ಮುಖಭಾವದಿಂದಲೆ
ಗೊತ್ತಾಗುವುದು ನೀವು ಈ ಸ್ಥಳಕ್ಕೆ ಹೊಸಬರು ಎಂದು

ಹೊಸಬರಾದರೆ ನೀವು ಯಾರಿಂದಲೂ ತಪ್ಪಿಸಿಕೊಳ್ಳಲಾರಿರಿ
ಒಳಬೀದಿಯಲ್ಲಿ ನಡೆದಿರಿ;  ಹಳೆ ಹಂಚಿನ ಅಂಗಡಿ
ಗೂಡಿನೊಳಗೆ ಕುಳಿತಿರಿ;  ಕ್ಷೌರಿಕನಲ್ಲಿ ಕಾಯುತ್ತಿರಿ:
ಎಲ್ಲರೂ ನಿಮ್ಮನ್ನು ಗಮನಿಸುತ್ತಾರೆ.  ನಿಮ್ಮ ಅಂಗಿಯ
ಬಣ್ಣವನ್ನೂ, ತಲೆಗೂದಲಿನ ಉದ್ದವನ್ನೂ ಕಣ್ಣಿನಲ್ಲೆ
ಹಿಡಿದು ಬಿಡುತ್ತಾರೆ.  ಯಾರೋ ಹೇಳಿದರೆಂದು ನೀವು
ಸುಮ್ಮನೇ ಈ ಕಡೆ ಬಂದಿರಬಹುದು.  ಸುದ್ದಿಯಲ್ಲಿ
ಬೀಳುವುದು ನಿಮಗೆ ಇಷ್ಟವಿಲ್ಲದಿರಬಹುದು.  ಆದರೂ
ಸುದ್ದಿಯಿಂದ ತಪ್ಪಿಸಿಕೊಳ್ಳಲಾರಿರಿ ನೀವು.  ಕಾರಣ
ನೀವು ಪ್ರೀತಿಸಿ, ಮದುವೆಯಾಗಲಾರದ ಹುಡುಗಿ
ಇಲ್ಲೇ ಇದ್ದಾಳೆ.   ಆ ಮೇಲೆ ನೀವೆಂದೂ
ಹೊಸಬರಾಗಿ ಉಳಿಯುವುದಿಲ್ಲ ಇವರ ಮಧ್ಯೆ.

ಹೇಗೆ ಉಳಿಯುವುದು ಸಾಧ್ಯ? ಈ ಊರ
ಅನ್ನ ತಿಳಿ ಸಾರು, ಕಬ್ಬಿನ ಹಾಲು, ಅಂಗಡಿ ವ್ಯವಹಾರ
ಸೋಡ ಬೀಡ, ಜಗಳ, ಪ್ರೇಮ ಎಲ್ಲರಿಗೂ
ಒಂದೇ ಗುರುತು ಒತ್ತಿಬಿಡುತ್ತವೆ.  ಕ್ರಮೇಣ
ನೀವು ಇಲ್ಲಿನ ಸಭೆಗಳಲ್ಲಿ ಮಾತಾಡುತ್ತಿರುವುದನ್ನು ಕಂಡು
ನಿಮಗೇ ಆಶ್ಚರ್ಯವಾಗಬಹುದು.  ಈ ಆಶ್ಚರ್ಯವೂ
ಹೋಗುವುದು.  ಇನ್ನೆಂದೂ ನೀವು ಕಿರಿಕಿರಿಯ ಪ್ರಶ್ನೆಗಳನ್ನು
ಕೇಳುವುದಿಲ್ಲ.  ಅದಲ್ಲದೆ, ಹೊಸಬರಾಗಿಯೇ
ಉಳಿಯಬೇಕೆಂದು ಮಾಡಿದ್ದರೆ ನೀವು-
ನಿಮ್ಮ ಮುಂದಿನ ಬಸ್ಸು ಇನ್ನರ್ಧ ಗಂಟೆಯಲ್ಲಿ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...