Home / ಕವನ / ಕವಿತೆ / ಹೊಸಬರು

ಹೊಸಬರು

ಈ ಕೊಳ ಯಾಕೆ ಕೊಳಚೆಯಾಗಿದೆ?  ಎಂಜಲನ್ನ
ಯಾಕೆ ಬೀದಿಗೆಸೆಯುತ್ತೀರಿ?  ಇದೇನು ದೇವಸ್ಥಾನದ
ಮುಂದೆ ಮೂಗಿಗೆ ಹಿಡಿಯುವ ಘಾಟು?  ಅಚೀಚೆ
ಉಗಿಯುತ್ತ ಹೋಗುವ ಆ ಅವರು ಯಾರು?  ಇದು
ಬಸ್ಸು ನಿಲ್ದಾಣವೆ ಅಥವ… ಎಂಬಿತ್ಯಾದಿಯಾಗಿ ನೀವು
ಕೇಳಲಿ, ಕೇಳದೆ ಇರಲಿ, ನಿಮ್ಮ ಮುಖಭಾವದಿಂದಲೆ
ಗೊತ್ತಾಗುವುದು ನೀವು ಈ ಸ್ಥಳಕ್ಕೆ ಹೊಸಬರು ಎಂದು

ಹೊಸಬರಾದರೆ ನೀವು ಯಾರಿಂದಲೂ ತಪ್ಪಿಸಿಕೊಳ್ಳಲಾರಿರಿ
ಒಳಬೀದಿಯಲ್ಲಿ ನಡೆದಿರಿ;  ಹಳೆ ಹಂಚಿನ ಅಂಗಡಿ
ಗೂಡಿನೊಳಗೆ ಕುಳಿತಿರಿ;  ಕ್ಷೌರಿಕನಲ್ಲಿ ಕಾಯುತ್ತಿರಿ:
ಎಲ್ಲರೂ ನಿಮ್ಮನ್ನು ಗಮನಿಸುತ್ತಾರೆ.  ನಿಮ್ಮ ಅಂಗಿಯ
ಬಣ್ಣವನ್ನೂ, ತಲೆಗೂದಲಿನ ಉದ್ದವನ್ನೂ ಕಣ್ಣಿನಲ್ಲೆ
ಹಿಡಿದು ಬಿಡುತ್ತಾರೆ.  ಯಾರೋ ಹೇಳಿದರೆಂದು ನೀವು
ಸುಮ್ಮನೇ ಈ ಕಡೆ ಬಂದಿರಬಹುದು.  ಸುದ್ದಿಯಲ್ಲಿ
ಬೀಳುವುದು ನಿಮಗೆ ಇಷ್ಟವಿಲ್ಲದಿರಬಹುದು.  ಆದರೂ
ಸುದ್ದಿಯಿಂದ ತಪ್ಪಿಸಿಕೊಳ್ಳಲಾರಿರಿ ನೀವು.  ಕಾರಣ
ನೀವು ಪ್ರೀತಿಸಿ, ಮದುವೆಯಾಗಲಾರದ ಹುಡುಗಿ
ಇಲ್ಲೇ ಇದ್ದಾಳೆ.   ಆ ಮೇಲೆ ನೀವೆಂದೂ
ಹೊಸಬರಾಗಿ ಉಳಿಯುವುದಿಲ್ಲ ಇವರ ಮಧ್ಯೆ.

ಹೇಗೆ ಉಳಿಯುವುದು ಸಾಧ್ಯ? ಈ ಊರ
ಅನ್ನ ತಿಳಿ ಸಾರು, ಕಬ್ಬಿನ ಹಾಲು, ಅಂಗಡಿ ವ್ಯವಹಾರ
ಸೋಡ ಬೀಡ, ಜಗಳ, ಪ್ರೇಮ ಎಲ್ಲರಿಗೂ
ಒಂದೇ ಗುರುತು ಒತ್ತಿಬಿಡುತ್ತವೆ.  ಕ್ರಮೇಣ
ನೀವು ಇಲ್ಲಿನ ಸಭೆಗಳಲ್ಲಿ ಮಾತಾಡುತ್ತಿರುವುದನ್ನು ಕಂಡು
ನಿಮಗೇ ಆಶ್ಚರ್ಯವಾಗಬಹುದು.  ಈ ಆಶ್ಚರ್ಯವೂ
ಹೋಗುವುದು.  ಇನ್ನೆಂದೂ ನೀವು ಕಿರಿಕಿರಿಯ ಪ್ರಶ್ನೆಗಳನ್ನು
ಕೇಳುವುದಿಲ್ಲ.  ಅದಲ್ಲದೆ, ಹೊಸಬರಾಗಿಯೇ
ಉಳಿಯಬೇಕೆಂದು ಮಾಡಿದ್ದರೆ ನೀವು-
ನಿಮ್ಮ ಮುಂದಿನ ಬಸ್ಸು ಇನ್ನರ್ಧ ಗಂಟೆಯಲ್ಲಿ
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ