ಹೊಸಬರು

ಈ ಕೊಳ ಯಾಕೆ ಕೊಳಚೆಯಾಗಿದೆ?  ಎಂಜಲನ್ನ
ಯಾಕೆ ಬೀದಿಗೆಸೆಯುತ್ತೀರಿ?  ಇದೇನು ದೇವಸ್ಥಾನದ
ಮುಂದೆ ಮೂಗಿಗೆ ಹಿಡಿಯುವ ಘಾಟು?  ಅಚೀಚೆ
ಉಗಿಯುತ್ತ ಹೋಗುವ ಆ ಅವರು ಯಾರು?  ಇದು
ಬಸ್ಸು ನಿಲ್ದಾಣವೆ ಅಥವ… ಎಂಬಿತ್ಯಾದಿಯಾಗಿ ನೀವು
ಕೇಳಲಿ, ಕೇಳದೆ ಇರಲಿ, ನಿಮ್ಮ ಮುಖಭಾವದಿಂದಲೆ
ಗೊತ್ತಾಗುವುದು ನೀವು ಈ ಸ್ಥಳಕ್ಕೆ ಹೊಸಬರು ಎಂದು

ಹೊಸಬರಾದರೆ ನೀವು ಯಾರಿಂದಲೂ ತಪ್ಪಿಸಿಕೊಳ್ಳಲಾರಿರಿ
ಒಳಬೀದಿಯಲ್ಲಿ ನಡೆದಿರಿ;  ಹಳೆ ಹಂಚಿನ ಅಂಗಡಿ
ಗೂಡಿನೊಳಗೆ ಕುಳಿತಿರಿ;  ಕ್ಷೌರಿಕನಲ್ಲಿ ಕಾಯುತ್ತಿರಿ:
ಎಲ್ಲರೂ ನಿಮ್ಮನ್ನು ಗಮನಿಸುತ್ತಾರೆ.  ನಿಮ್ಮ ಅಂಗಿಯ
ಬಣ್ಣವನ್ನೂ, ತಲೆಗೂದಲಿನ ಉದ್ದವನ್ನೂ ಕಣ್ಣಿನಲ್ಲೆ
ಹಿಡಿದು ಬಿಡುತ್ತಾರೆ.  ಯಾರೋ ಹೇಳಿದರೆಂದು ನೀವು
ಸುಮ್ಮನೇ ಈ ಕಡೆ ಬಂದಿರಬಹುದು.  ಸುದ್ದಿಯಲ್ಲಿ
ಬೀಳುವುದು ನಿಮಗೆ ಇಷ್ಟವಿಲ್ಲದಿರಬಹುದು.  ಆದರೂ
ಸುದ್ದಿಯಿಂದ ತಪ್ಪಿಸಿಕೊಳ್ಳಲಾರಿರಿ ನೀವು.  ಕಾರಣ
ನೀವು ಪ್ರೀತಿಸಿ, ಮದುವೆಯಾಗಲಾರದ ಹುಡುಗಿ
ಇಲ್ಲೇ ಇದ್ದಾಳೆ.   ಆ ಮೇಲೆ ನೀವೆಂದೂ
ಹೊಸಬರಾಗಿ ಉಳಿಯುವುದಿಲ್ಲ ಇವರ ಮಧ್ಯೆ.

ಹೇಗೆ ಉಳಿಯುವುದು ಸಾಧ್ಯ? ಈ ಊರ
ಅನ್ನ ತಿಳಿ ಸಾರು, ಕಬ್ಬಿನ ಹಾಲು, ಅಂಗಡಿ ವ್ಯವಹಾರ
ಸೋಡ ಬೀಡ, ಜಗಳ, ಪ್ರೇಮ ಎಲ್ಲರಿಗೂ
ಒಂದೇ ಗುರುತು ಒತ್ತಿಬಿಡುತ್ತವೆ.  ಕ್ರಮೇಣ
ನೀವು ಇಲ್ಲಿನ ಸಭೆಗಳಲ್ಲಿ ಮಾತಾಡುತ್ತಿರುವುದನ್ನು ಕಂಡು
ನಿಮಗೇ ಆಶ್ಚರ್ಯವಾಗಬಹುದು.  ಈ ಆಶ್ಚರ್ಯವೂ
ಹೋಗುವುದು.  ಇನ್ನೆಂದೂ ನೀವು ಕಿರಿಕಿರಿಯ ಪ್ರಶ್ನೆಗಳನ್ನು
ಕೇಳುವುದಿಲ್ಲ.  ಅದಲ್ಲದೆ, ಹೊಸಬರಾಗಿಯೇ
ಉಳಿಯಬೇಕೆಂದು ಮಾಡಿದ್ದರೆ ನೀವು-
ನಿಮ್ಮ ಮುಂದಿನ ಬಸ್ಸು ಇನ್ನರ್ಧ ಗಂಟೆಯಲ್ಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೩೬
Next post ಚಂದಮಾಮ

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…