Home / ಕವನ / ಕವಿತೆ / ಹೊಸಬರು

ಹೊಸಬರು

ಈ ಕೊಳ ಯಾಕೆ ಕೊಳಚೆಯಾಗಿದೆ?  ಎಂಜಲನ್ನ
ಯಾಕೆ ಬೀದಿಗೆಸೆಯುತ್ತೀರಿ?  ಇದೇನು ದೇವಸ್ಥಾನದ
ಮುಂದೆ ಮೂಗಿಗೆ ಹಿಡಿಯುವ ಘಾಟು?  ಅಚೀಚೆ
ಉಗಿಯುತ್ತ ಹೋಗುವ ಆ ಅವರು ಯಾರು?  ಇದು
ಬಸ್ಸು ನಿಲ್ದಾಣವೆ ಅಥವ… ಎಂಬಿತ್ಯಾದಿಯಾಗಿ ನೀವು
ಕೇಳಲಿ, ಕೇಳದೆ ಇರಲಿ, ನಿಮ್ಮ ಮುಖಭಾವದಿಂದಲೆ
ಗೊತ್ತಾಗುವುದು ನೀವು ಈ ಸ್ಥಳಕ್ಕೆ ಹೊಸಬರು ಎಂದು

ಹೊಸಬರಾದರೆ ನೀವು ಯಾರಿಂದಲೂ ತಪ್ಪಿಸಿಕೊಳ್ಳಲಾರಿರಿ
ಒಳಬೀದಿಯಲ್ಲಿ ನಡೆದಿರಿ;  ಹಳೆ ಹಂಚಿನ ಅಂಗಡಿ
ಗೂಡಿನೊಳಗೆ ಕುಳಿತಿರಿ;  ಕ್ಷೌರಿಕನಲ್ಲಿ ಕಾಯುತ್ತಿರಿ:
ಎಲ್ಲರೂ ನಿಮ್ಮನ್ನು ಗಮನಿಸುತ್ತಾರೆ.  ನಿಮ್ಮ ಅಂಗಿಯ
ಬಣ್ಣವನ್ನೂ, ತಲೆಗೂದಲಿನ ಉದ್ದವನ್ನೂ ಕಣ್ಣಿನಲ್ಲೆ
ಹಿಡಿದು ಬಿಡುತ್ತಾರೆ.  ಯಾರೋ ಹೇಳಿದರೆಂದು ನೀವು
ಸುಮ್ಮನೇ ಈ ಕಡೆ ಬಂದಿರಬಹುದು.  ಸುದ್ದಿಯಲ್ಲಿ
ಬೀಳುವುದು ನಿಮಗೆ ಇಷ್ಟವಿಲ್ಲದಿರಬಹುದು.  ಆದರೂ
ಸುದ್ದಿಯಿಂದ ತಪ್ಪಿಸಿಕೊಳ್ಳಲಾರಿರಿ ನೀವು.  ಕಾರಣ
ನೀವು ಪ್ರೀತಿಸಿ, ಮದುವೆಯಾಗಲಾರದ ಹುಡುಗಿ
ಇಲ್ಲೇ ಇದ್ದಾಳೆ.   ಆ ಮೇಲೆ ನೀವೆಂದೂ
ಹೊಸಬರಾಗಿ ಉಳಿಯುವುದಿಲ್ಲ ಇವರ ಮಧ್ಯೆ.

ಹೇಗೆ ಉಳಿಯುವುದು ಸಾಧ್ಯ? ಈ ಊರ
ಅನ್ನ ತಿಳಿ ಸಾರು, ಕಬ್ಬಿನ ಹಾಲು, ಅಂಗಡಿ ವ್ಯವಹಾರ
ಸೋಡ ಬೀಡ, ಜಗಳ, ಪ್ರೇಮ ಎಲ್ಲರಿಗೂ
ಒಂದೇ ಗುರುತು ಒತ್ತಿಬಿಡುತ್ತವೆ.  ಕ್ರಮೇಣ
ನೀವು ಇಲ್ಲಿನ ಸಭೆಗಳಲ್ಲಿ ಮಾತಾಡುತ್ತಿರುವುದನ್ನು ಕಂಡು
ನಿಮಗೇ ಆಶ್ಚರ್ಯವಾಗಬಹುದು.  ಈ ಆಶ್ಚರ್ಯವೂ
ಹೋಗುವುದು.  ಇನ್ನೆಂದೂ ನೀವು ಕಿರಿಕಿರಿಯ ಪ್ರಶ್ನೆಗಳನ್ನು
ಕೇಳುವುದಿಲ್ಲ.  ಅದಲ್ಲದೆ, ಹೊಸಬರಾಗಿಯೇ
ಉಳಿಯಬೇಕೆಂದು ಮಾಡಿದ್ದರೆ ನೀವು-
ನಿಮ್ಮ ಮುಂದಿನ ಬಸ್ಸು ಇನ್ನರ್ಧ ಗಂಟೆಯಲ್ಲಿ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...