Home / ಕವನ / ಕವಿತೆ / ಹಳೆ ಮಾರ್ಗಗಳು

ಹಳೆ ಮಾರ್ಗಗಳು


ಕುಂಬಳೆ ಮಂಜೇಶ್ವರ ಪೆರ್ಲ ಪುತ್ತೂರು
ಬದಿಯಡ್ಕ ಕಾರಡ್ಕ ಸುಳ್ಯ ಹೀಗೆ
ಇಲ್ಲಿಗೆ ಹಲವು ಮಾರ್ಗಗಳು ಬಂದು ಸೇರಿದವು
ಮೊದಲು ಯಾರೂ ಕಡಿಯಲಿಲ್ಲ ಇವನ್ನು
ಕವಿತೆಯ ಸಾಲುಗಳಂತೆ ಹುಟ್ಟಿದವು.


ನಡೆದದ್ದೆ ಮಾರ್ಗ ಆಗ.  ಹಾಗೆ ನಡೆದೇ
ತಲಪಿದವು ಈ ಪೇಟೆಯನ್ನು ಹಳ್ಳಿಗಳಿಂದ
ಮೊಣಕಾಲೆತ್ತರಕ್ಕೆ ಎಬ್ಬಿಸಿದವು ಕೆಂಪು ಮಣ್ಣು
ಮಳೆಗೆ ತೊಳೆದುಕೊಳ್ಳುವುದಕ್ಕಷ್ಟೆ.  ಅಲ್ಲದಿದ್ದರೆ
ನೆರೆನೀರಿಗೆಲ್ಲಿಂದ ಆ ತರದ ಬಣ್ಣ?


ನಡೆದವರಿಗೆ ಮಾತ್ರ ಗೊತ್ತು ಮಾರ್ಗಗಳ ಮರ್ಮ
ಎಲ್ಲಿ ಅವು ಮಾತು ತೆಗೆಯುತ್ತವೆ ಮತ್ತು ಎಲ್ಲಿ
ಮೌನವಾಗುತ್ತವೆ ಎಂದು. ಮನುಷ್ಯ ದುಃಖದ
ಬಗ್ಗೆ ದೊಡ್ಡದಾಗಿ ಹೇಳುವ ಈಗಿನವರು
ಹಳೆಯ ಮಾರ್ಗಗಳಲ್ಲೆಂದೂ ನಡೆದಿರಲಿಕ್ಕಿಲ್ಲ.


ನಡೆದ ನೆನಪಿದೆ ನನಗೆ ಅಂಥ ಕೊರಕಲುಗಳನ್ನು
ಬರಿಗಾಲಲ್ಲಿ, ಯಾವ ವಿಷಾದವೂ ಅನಿಸದೆ.  ಮೂವತ್ತು
ವರ್ಷಗಳ ಹಿಂದೆ ಕೋಟೂರ ಚಡವಿನಲ್ಲಿ
ಒಂದು ಇದ್ದಿಲ ಬಸ್ಸು ಕಾಣಿಸಿಕೊಂಡು
ಗದ್ದೆಗಳ ಮೇಲೆ ಧೂಳು ಹಾರಿಸಿ ಹೋದ ನೆನಪೂ ಉಂಟು


ನಂತರ ಇದೆಲ್ಲ ಹೇಗೆ ಬದಲಾಯಿತೆಂದು ತಿಳಿಯದು.
ಹಳೆ ಮಾರ್ಗಗಳೀಗ ಇದ್ದಲ್ಲೆ ಬೆಳೆದಿವೆ.
ಜಲ್ಲಿ ಹಾಸಿ ದಾಮರು ಹಾಕಿದ್ದಾರೆ.  ಅನೇಕ
ಮೋಟರುಗಳು ಓಡಾಡುತ್ತಿವೆ ದಿನಕ್ಕೆ.
ದೂರವನ್ನು ಮಿನಿಟುಗಳಲ್ಲಿ ಹೇಳುತ್ತಿದ್ದಾರೆ.


ಈ ಪೇಟೆಯ ಸೆರಗಿನಲ್ಲಿ ಹಾದು ಹೋಗಿದೆ
ಒಂದು ರಾಷ್ಟ್ರೀಯ ಹೆದ್ದಾರಿ.  ನಾವೂ ಸೇರಿದ್ದೇವೆ
ದೇಶದ ಸಾರಿಗೆ ವ್ಯವಸ್ಥೆಯಲ್ಲಿ.  ಆದರೂ
ಓಡುತ್ತಿದೆ ಹಳೆ ಮಾರ್ಗಗಳ ಬೆನ್ನು ಹತ್ತಿ ಮನಸ್ಸು
ಈಗಿಲ್ಲದ ಕಾಲಸಪ್ಪಳಗಳನ್ನು ಕೇಳಲು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...