ಕೋಗಿಲೆಗೆ

ಯಾರು ಕಲಿಸಿದರು ಗೆಳತಿ ಹಾಡುವುದ ಹೇಳೆ
ನನಗಿಷ್ಟು ಕಲಿಸುವೆಯ ಹಾಡಿನ ಲೀಲೆ
ಮರಗಳಲಿ ಕುಳಿತಿರುವೆ ಕಾಣದಾ ಕೊಂಬೆಯೊಳು
ಸುಖ ದುಃಖದಿಂ ದೂರ ನೆಲದಿಂದ ಮೇಲೆ

ಸಿಹಿಕಹಿಗಳೊಳಗಿನಿತು ಬೆರೆಯದೇ
ಶುದ್ಧ ಸಲಿಲದ ರೀತಿ ಇಹುದು ನಿನ್ನಯ ಗಾನ
ಹುಟ್ಟು ಸಾವುಗಳ ನೆರಳು ಬೆಳಕುಗಳಿಂದ
ಆಚೆಗಿಹ ವಿಶ್ವಚೇತನದ ವರದಾನಾ

ತಾಳವಿಲ್ಲ ಪಕ್ಕವಾದ್ಯವೊಂದು ಇಲ್ಲದಿದ್ದರು
ಕೇಳುವವರ ಸಭೆಯು ಇಲ್ಲ ಕೇಳಿ ಆಹ ಎನ್ನಲು
ಆದರೂ ಎಂಥ ಮಧುರ ಸಕ್ಕರೆಯ ಬೇನು
ಕಲಿಯಲಿಕ್ಕೆ ಇಷ್ಟು ಕಾಲ ಹೋಗಿದ್ದೆ ಏನು

ಒಂದೇ ಸ್ವರದಲಿ ಜೇನಿನ ಮಳೆಯನು
ಸುರಿಯುವಿ ಬೇಸರವಿಲ್ಲದೆ ನೀನು
ಇಲ್ಲಿಯ ಸರಗಳ ಕೇಳುತ ದಣಿದಿಹೆ
ಅಲ್ಲಿಯ ರಾಗವ ಕೇಳಲು ಕಾದಿಹೆ

ನಿನಗಾಗಿಯೆ ನೀ ಹಾಡಲು ನನಗಿರುವುದು ಲಾಭ
ತನಗಾಗಿಯೆ ಸೂರ್ಯನಿರಲು ಬೆಳಕೆನ್ನೆಯ ಲಾಭ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಕ್ಕಳ
Next post ಹೇಳಿ ನೀವೆ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

cheap jordans|wholesale air max|wholesale jordans|wholesale jewelry|wholesale jerseys