Home / ಕವನ / ಕವಿತೆ / ಧೈರ್ಯ ಬೇಕು

ಧೈರ್ಯ ಬೇಕು

ದೊಡ್ಡ ಕೆಲಸದ ಮುಗಿದ ಮೇಲೆ | ಸಣ್ಣ ಕೆಲಸ ಮಾಡಲಿಕ್ಕೆ
ಧೈರ್ಯ ಬೇಕೂ ಅದಕೆ ಧೈರ್ಯ ಬೇಕು
ಸತ್ಯವನ್ನು ಮಿಥ್ಯ ಮುಚ್ಚಿ | ಎತ್ತಿ ತಲೆಯ ಮೆರೆಯುವಾಗ
ಅದರ ತಲೆಗೆ ಹೊಡೆಯಲಿಕ್ಕೆ
ಧೈರ್ಯ ಬೇಕೂ ಅದಕೆ ಧೈರ್ಯ ಬೇಕು

ಹೃದಯದಲ್ಲಿ ಶೋಕರಸವು ತುಟಿಯ ಮೇಲೆ ಹಾಸ್ಯ ರಸವು
ರಸದ ಇಂಥ ಕಲಬೆರಕೆಗೆ || ಧೈರ್ಯ….
ಸುತಮುತ್ತಲ ಕಡೆಗೆ | ಕತ್ತಲೊಂದೆ ತುಂಬಿದಾಗ
ಕಿರಣವನ್ನು ಕಾಣಲಿಕ್ಕೆ || ಧೈರ್ಯ….

ಸಂಶಯ ನಿರಾಶೆ ತುಂಬಿ | ಉಸಿರು ಕಟ್ಟಿ ಹೋಗುವಾಗ
ನಂಬಿಕೆಯಲಿ ತಲೆಯನೆತ್ತೆ || ಧೈರ್ಯ….
ನಮ್ಮ ಅಳುವೆ ಹೊರ ಒಳಗಿರೆ | ಇತರರಳುವ ತವಿಸಿ ನಗುವ
ಹೊಮ್ಮಿಸುವಾ ಸಾಹಸಕ್ಕೆ || ಧೈರ್ಯ….

ದೇಹಶಕ್ತಿ ಇಳಿದು ಹೋಗಿ | ದಿನದ ಕೆಲಸ ಸಪ್ಪೆಯಾಗಿ
ಇರುವ ಕಸವ ರಸ ಮಾಡಲು || ಧೈರ್ಯ….
ಮಾತುಗಳಿಗೆ ಬಣ್ಣ ಕೊಟ್ಟು| ಮೋಸ ಬಲೆಗೆ ಎಳೆಯುವಾಗ
ಇದ್ದುದಿದ್ದ ಹಾಗೆ ಪೇಳೆ || ಧೈರ್ಯ….

ನೀಚತನವು ದನಿಯನೆತ್ತಿ | ಎಳೆಯ ಸತ್ಯವನೊತ್ತಲು
ಎಳೆಯ ಲತೆಯು ಮರವಾಗಲು || ಧೈರ್ಯ….
ಗುಡ್ಡ ತಲೆಯ ಮೇಲೆ ಬಿದ್ದ| ರೀತಿಯಲ್ಲಿ ದುಃಖವಡಸೆ
ನಿನ್ನ ಇಚ್ಛೆ ದೇವ ಎನಲು || ಧೈರ್ಯ….
ವಿಧಿಯು ನಿನ್ನ ಬಲಗೆನ್ನೆಗೆ ಹೊಡೆತ ಕೊಡಲು ಸಿಟ್ಟಾಗದೆ
ನಿನ್ನ ಎಡದ ಕೆನ್ನೆ ಕೊಡಲು || ಧೈರ್ಯ….
ಕತ್ತಿ ಮದ್ದು ಗುಂಡುಗಳಲಿ ತೋರುವಂಥದಲ್ಲ ಧೈರ್ಯ
ಸೃಷ್ಟಿಯಲ್ಲಿ ಮಗುವು ಕೂಡ ಮಾಡಬಲ್ಲ ಸಹಜ ಧೈರ್ಯ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...