ಗುಗ್ಗುಳ ಹೊರಟಿತಮ್ಮಾ

ಗುಗ್ಗುಳ ಹೊರಟಿತಮ್ಮಾ ಈ ಊರೊಳು
ಗುಗ್ಗುಳ ಹೊರಟಿತಮ್ಮಾ || ಪ||

ಗುಗ್ಗುಳ ಹೊರಟಿತು
ವೆಗ್ಗಳಾಯಿತು ಮ್ಯಾಳಾ
ಸ್ವರ್ಗದೊಳಿರುವ ಶ್ರೀ ರುದ್ರನರಿಯದಾಗಿ ||ಅ.ಪ.||

ಭೂತ ಪಂಚಕ ರೂಪದಾ ಪುರಂತರು
ಆತುಕೊಂಡಿರುತಿಹರು
ನೂತನವಾಯಿತು ಏ ತರುಣಿ ಕೇಳೆ
ಧಾತ ಶಿವನ ತನುಜಾತನರಿಯದಾಗಿ ||೧||

ದಕ್ಷನ ವಧಮಾಡಿದೆ ಷಣ್ಮುಖದೇವಾ
ಸಾಕ್ಷಾತನನು ಕೂಡಿದೆ
ಈ ಕ್ಷಿತಿಯೊಳು ಬೂದ್ಯಾಳ ಗ್ರಾಮದೊಳು ತಾ
ಸಾಕ್ಷತ ಬಸವನಾಲಯದಂಗಳದೊಳು ||೨||

ಇಳೆಯೋಳ್ ಅಧಿಕವಾಯಿತು ಶಿಶು-
ನಾಳಧೀಶನ ಮನವೆನಿತು
ತಿಳಿದು ನೋಡೆ ಇಂದು ಲಲನಾಮಣಿಯೆ ಕೇಳೆ
ಹೊಳಿವ ಕುಂಭದ ರೂಪಾ ಬೆಳಕಿನ ಉರಿಯಂತೆ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುತ್ತು ರನ್ನದ ಕಿಡಿ ಉದುರೀತು
Next post ವಾರಿಜಾಕ್ಷಿ ವನಪಿನೊಯ್ಯಾರೆ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಬೋರ್ಡು ಒರಸುವ ಬಟ್ಟೆ

    ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ… Read more…