Home / ಕವನ / ಕವಿತೆ / ಅವರವರ ಚಾಳಿ

ಅವರವರ ಚಾಳಿ

ಎಲ್ಲರಿಗೂ ಒಂದೊಂದು ಚಾಳಿ
ಇರುವುದಿಲ್ಲವೆ, ಹೇಳಿ.

ಹಳೆ ಆಲದ ಮರದಿಂದ ತಲೆಕೆಳಗಾಗಿ ತೂಗುವ ಬೇತಾಳನಿಗೆ
ವಿಕ್ರಮಾದಿತ್ಯನ ಹೆಗಲಮೇಲೆ ಸವಾರಿ ಮಾಡುತ್ತ
ಅಮವಾಸ್ಯೆಯ ರಾತ್ರಿಗಳಲ್ಲಿ
ಸುಮ್ಮನೇ ಅವನ ಮೌನಮುರಿಯುವ ಕಥಾವಳಿ.

ಪ್ರಶ್ನೆಗಳನ್ನು ಹಾಕುತ್ತಲೇ ಸಂದೇಹಗಳನ್ನು ಎತ್ತುತ್ತಲೇ
ಸ್ವಸ್ಥರಿಗೆ ಸದಾ ತೊಂದರೆಕೊಟ್ಟ ಸಾಕ್ರೆಟೀಸನಿಗೆ
ಮರಣಶಯ್ಯೆಯಲ್ಲೂ ನೆನಪು
ಯಾವ ದೈವಕ್ಕೊ ತಾನು ಹರಕೆಹೊತ್ತ ಕೋಳಿ.

ದೇಶಭ್ರಷ್ಟನಾಗಿ ತನ್ನ ತ್ರಿಲೋಕಗಳನ್ನು ತಾನೆ ಸೃಷ್ಟಿಸಿಕೊಂಡು
ಎಂದೋ ಕಂಡು ಮತ್ತೆ ಕಾಣದ ಹುಡುಗಿ ಸ್ವರ್ಗದಲ್ಲಿ
ಕೈಹಿಡಿದು ನಡೆಸುತ್ತಿರುವಾಗಲೂ ಡಾಂಟೆಗೆ
ತನ್ನ ದೇಶದ ಬಗ್ಗೆ ಮರುಕಳಿಸುವ ಕಳಕಳಿ.

ಒಂಟಿ ಮರಗಳಿಂದಲೂ, ಕೊಳಗಳಿಂದಲೂ, ಕೊತ್ತಳಗಳಿಂದಲೂ
ತನ್ನ ಸ್ವಂತ ಪ್ರತೀಕಗಳನ್ನು ಆವಾಹಿಸುವಾಗ ಯೇಟ್ಸನಿಗೆ
ರೈಲು ನಿಲ್ದಾಣದಲ್ಲಿ ಹೀಗೆ
ಮಾಡ್‌ಗಾನ್ ಹಿಂದೆಸೆದು ನಿಂತ ನಿಲುವಳಿ.

ಮತ್ತೆ ಈ ಅರಬೀಸಮುದ್ರ ಮತ್ತು ಪಶ್ಚಿಮಘಟ್ಟಗಳ ನಡುವೆ
ಅ-ರಾಜಕೀಯವಾಗಿ ಬೆಳೆದಿದ್ದ ನಮಗೆ
೧೯೫೬ರಿಂದೀಚೆಗೆ
ಕಾಸರಗೋಡು ಕರ್ನಾಟಕ ಪ್ರಾಂತೀಕರಣ ಚಳುವಳಿ.

ಎಲ್ಲರಿಗೂ ಅವರವರ ಚಾಳಿ
ಇರುವುದಿಲ್ಲವೆ, ಹೇಳಿ.
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...