Home / ಕವನ / ಕವಿತೆ / ಅವರವರ ಚಾಳಿ

ಅವರವರ ಚಾಳಿ

ಎಲ್ಲರಿಗೂ ಒಂದೊಂದು ಚಾಳಿ
ಇರುವುದಿಲ್ಲವೆ, ಹೇಳಿ.

ಹಳೆ ಆಲದ ಮರದಿಂದ ತಲೆಕೆಳಗಾಗಿ ತೂಗುವ ಬೇತಾಳನಿಗೆ
ವಿಕ್ರಮಾದಿತ್ಯನ ಹೆಗಲಮೇಲೆ ಸವಾರಿ ಮಾಡುತ್ತ
ಅಮವಾಸ್ಯೆಯ ರಾತ್ರಿಗಳಲ್ಲಿ
ಸುಮ್ಮನೇ ಅವನ ಮೌನಮುರಿಯುವ ಕಥಾವಳಿ.

ಪ್ರಶ್ನೆಗಳನ್ನು ಹಾಕುತ್ತಲೇ ಸಂದೇಹಗಳನ್ನು ಎತ್ತುತ್ತಲೇ
ಸ್ವಸ್ಥರಿಗೆ ಸದಾ ತೊಂದರೆಕೊಟ್ಟ ಸಾಕ್ರೆಟೀಸನಿಗೆ
ಮರಣಶಯ್ಯೆಯಲ್ಲೂ ನೆನಪು
ಯಾವ ದೈವಕ್ಕೊ ತಾನು ಹರಕೆಹೊತ್ತ ಕೋಳಿ.

ದೇಶಭ್ರಷ್ಟನಾಗಿ ತನ್ನ ತ್ರಿಲೋಕಗಳನ್ನು ತಾನೆ ಸೃಷ್ಟಿಸಿಕೊಂಡು
ಎಂದೋ ಕಂಡು ಮತ್ತೆ ಕಾಣದ ಹುಡುಗಿ ಸ್ವರ್ಗದಲ್ಲಿ
ಕೈಹಿಡಿದು ನಡೆಸುತ್ತಿರುವಾಗಲೂ ಡಾಂಟೆಗೆ
ತನ್ನ ದೇಶದ ಬಗ್ಗೆ ಮರುಕಳಿಸುವ ಕಳಕಳಿ.

ಒಂಟಿ ಮರಗಳಿಂದಲೂ, ಕೊಳಗಳಿಂದಲೂ, ಕೊತ್ತಳಗಳಿಂದಲೂ
ತನ್ನ ಸ್ವಂತ ಪ್ರತೀಕಗಳನ್ನು ಆವಾಹಿಸುವಾಗ ಯೇಟ್ಸನಿಗೆ
ರೈಲು ನಿಲ್ದಾಣದಲ್ಲಿ ಹೀಗೆ
ಮಾಡ್‌ಗಾನ್ ಹಿಂದೆಸೆದು ನಿಂತ ನಿಲುವಳಿ.

ಮತ್ತೆ ಈ ಅರಬೀಸಮುದ್ರ ಮತ್ತು ಪಶ್ಚಿಮಘಟ್ಟಗಳ ನಡುವೆ
ಅ-ರಾಜಕೀಯವಾಗಿ ಬೆಳೆದಿದ್ದ ನಮಗೆ
೧೯೫೬ರಿಂದೀಚೆಗೆ
ಕಾಸರಗೋಡು ಕರ್ನಾಟಕ ಪ್ರಾಂತೀಕರಣ ಚಳುವಳಿ.

ಎಲ್ಲರಿಗೂ ಅವರವರ ಚಾಳಿ
ಇರುವುದಿಲ್ಲವೆ, ಹೇಳಿ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...