Home / ಕವನ / ಕವಿತೆ / ಹೈದರಾಬಾದಿನಲ್ಲಿ

ಹೈದರಾಬಾದಿನಲ್ಲಿ

ಮೊದಲು ಹವೆಯ ಬಗ್ಗೆ ಮಾತಾಡಿದೆವು
ಬಿಸಿಲ ಬೇಗೆ-ನೆಲದ ಧಗೆ-ಧೂಳು ಸುಳಿಗಾಳಿ
ಪಕೋಡಾ ಮಸಾಲೆ ಮೆಣಸು
ಕಾಯಿಸುವ ಹೊಗೆ
ಸೈಕಲು ರಿಕ್ಷಾಗಳ ಅಗತ್ಯ-ಅನಗತ್ಯ
ಎಮ್ಮೆಗಳ ಅಸಾಂಗತ್ಯ
ಹೈದರಾಬಾದಿನ ರಚನೆಯ ಕುರಿತು ಮಾತಾಡಿದೆವು
ವಾಸ್ತುಶಿಲ್ಪದ ಪ್ರಕಾರ
ಇದಕ್ಕೆ ಆಕಾರವಿಲ್ಲ ಆದರೆ
ನಡೆದಲ್ಲಿ ಬೆಳೆಯುವ
ನೋಡಿದಲ್ಲಿ ಏಳುವ
ಪವಾಡವಿದೆ
ನಿಜಾಮನನ್ನು ಬಯ್ದೆವು

ಒಬ್ಬರು ಹೇಳಿದರು-
ಹತ್ತು ವರ್ಷಗಳ ಕೆಳಗೆ
ನಾನೀ ನಗರವನ್ನು ಪ್ರೀತಿಸಿದ್ದೆ ಆಗ
ಗಾಳಿ ಬೆಳಕು ಮಳೆಯಿತ್ತು.  ಇಷ್ಟು ಜನ ಇರಲಿಲ್ಲ.
ಇನ್ನೊಬ್ಬರೆಂದರು-
ಹಿಂದೆ ಇದರ ಹೆಸರು ಭಾಗ್ಯನಗರ
ಒಂದು ಸಣ್ಣ ಪೇಟೆ
ಅದಕ್ಕೂ ಮೊದಲು ಇಲ್ಲಿ ಜನರೇ ಇರಲಿಲ್ಲ.
ಮೊತ್ತೊಬ್ಬರು ಕೇಳಿದರು-
ಹಾಗಾದರೆ ಈ ಶತಮಾನದ ಮೇಲೆ
ಇದರ ಅವಸ್ಥೆ ಏನು?
ಹೀಗೆ ಪ್ರಾಕ್ತನಾದ ರಹಸ್ಯ ಮತ್ತು
ಭವಿಷ್ಯದ ಆತಂಕದ ಮಧ್ಯೆ
ಹೈದರಾಬಾದಿಗಾಗಿ ನಾವು ಪರಿತಪಿಸಿದೆವು.

ನಾನೆಂದೆ-
ನನಗೆ ಈ ಹೈದರಾಬಾದು ಸುತ್ತಬೇಕು
ಇದರ ಆರಂಭ ಮತ್ತು ಅಂತ್ಯವನ್ನು ನೋಡಬೇಕು
ಇದರ ಜೋತುಬಿದ್ದ ಮಹಡಿಗಳನ್ನೂ
ಮತಾಡುತ್ತ ನಿಂತ ಮನುಷ್ಯರನ್ನೂ ದಾಟಿ
ಆಂಧ್ರಕ್ಕೆ ಆಂಧ್ರದಿಂದ ಹೊರಕ್ಕೆ
ತಲುಪುವ ದಾರಿಯನ್ನು ಕಂಡು ಹುಡುಕಬೇಕು.
ಆಚೆಗೆ ಕುಳಿತಿದ್ದ ವ್ಯಕ್ತಿಯೊಬ್ಬ ನಕ್ಕು ಹೇಳಿದ-
ಆಂಧ್ರವೆಂದರೆ ಇಂದಿರಾಗಾಂಧಿಯ ಸೀರೆ
ತೆಲಂಗಾಣ ಮಾತ್ರ ಬೇರೆ.
ನಾನು ತೆಲಂಗಾಣದ ಕವಿ.
ಯಾರೋ ಎತ್ತರದ ಧ್ವನಿಯಲ್ಲಿ ಹೇಳಿದರು-
ಎಲೆ ಕವಿ,
ನಿನಗೆ ಪ್ರಣಾಮ.  ನಿನಗಾಗಿ ನಾವು
ಎಷ್ಟು ಕಾಲದಿಂದ ಕಾಯುತ್ತಿಲ್ಲ!
ನಕ್ಸಲೀಯ,
ನಿನ್ನ ಗಡ್ಡ ಮೀಸೆಯ ಹಿಂದೆ ಮನುಷ್ಯ ಜನಾಂಗದ ಎಷ್ಟು
ಸಂಕಟವನ್ನು ಹಿಡಿದಿಟ್ಟಿದ್ದೀಯ.
ಅವನೆಂದ-
ನನ್ನ ನಕ್ಸಲೀಯ ಗೆಳೆಯನೊಬ್ಬ
ಮುಶೀರಾಬಾದ್ ಜೈಲಿನಿಲ್ಲಿದ್ದಾನೆ.
ಆತ ಕವಿತೆ ಬರೆಯಲಿಲ್ಲ.
ಆದರೂ ಕವಿಯಾಗಿದ್ದ.
ಆಮೇಲೆ ಎಲ್ಲರೂ ಕವಿತೆಯ ಬಗ್ಗೆ ಮಾತಾಡುತ್ತ ಕೂತರು.
ನಾನೆಂದೆ-
ನನಗೆ ಈ ಕೂಡಲೇ ಮುಶೀರಾಬಾದಿಗೆ ಹೋಗಬೇಕು.
ಯಾರು ಕೇಳಿಸಿಕೊಳ್ಳಲಿಲ್ಲ.

ಮತ್ತೆ ಹೊರ ಬಂದಾಗ ರಾತ್ರಿ ಬಹಳ ಸರಿದಿತ್ತು
ಅಬೀಡ್ಸಿನಿಂದ ಕೋಠಿಯ ನಡುವೆ
ಏನಿತ್ತು ಏನಿರಲಿಲ್ಲ
ಬೀದಿಯಲ್ಲಿ ಜನರಿದ್ದರೆ
ಇವರ ಕಣ್ಣುಗಳಲ್ಲಿ ಕಲ್ಲಿದ್ದಲೆ
ಯಾರೋ ನನ್ನನ್ನು ಕೂಗಿದರೆ
ನೆನಪಿಲ್ಲ
ಮಧ್ಯೆ ಒಂದೆರಡು ಬಾರಿ ಕಕ್ಕಿದ್ದು ಮಾತ್ರ ಗೊತ್ತು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...