Home / ಕವನ / ಕವಿತೆ / ರಾಮುಲುವೂ ಸೋಮುಲುವೂ

ರಾಮುಲುವೂ ಸೋಮುಲುವೂ

ನಿರ್ಜನವಾದ ಬಯಲು
ಹೊತ್ತಾದರೋ ಕಹಿಬೇವಿನ ಹೆಮ್ಮೆರಗಳ ಹಿಂದೆ ಮರೆಯಾಗುತ್ತಿದೆ
ಒಂದಿಷ್ಟು ಇಳಿಬೆಳಕು ಮಾತ್ರ
ಪುಡಿ ಪುಡಿಯಾದ ಒಣಹುಲ್ಲಿನ ಮೇಲೆ ಸಮಾನಾಂತರವಾಗಿ ಬಿದ್ದಿದೆ
ಅಷ್ಟರಲ್ಲಿ ಎಡಗಡೆಯಿಂದ (ಅಥವಾ ಬಲಗಡೆಯಿಂದ)
ರಾಮುಲುವೂ ಸೋಮುಲುವೂ
ಅನುಮಾನಿಸುತ್ತ ಅನುಮಾನಿಸುತ್ತ ಪ್ರವೇಶಿಸುವರು
ಅಂಗಿಯ ಬದಿಗೆ ಜೋತಕೈ, ಕಚ್ಚೆಯ ಕೆಳಗೆ ದೊಂಗಾಲು
ತಲೆಯಿರುವಲ್ಲಿ ಮುಂಡಾಸು-ದೂರಕ್ಕೆ ಇಷ್ಟೆ-
ಒಂದು ಕ್ಷಣ ಮುಖ ಮುಖ ನೋಡುತ್ತ ನಿಲ್ಲುವರು
ನಂತರ ಲಗುಬಗನೆ
ಚೆಂಡುಗಳನ್ನರಸುತ್ತ ಬೇರೆ ಬೇರೆ ದಿಕ್ಕುಗಳಿಗೆ ಚದುರುವರು
ಹೀಗೆ ಅರಸುತ್ತ, ಕಂಡುಹುಡುಕುತ್ತ
ಹಲವು ಕಾಲದ ಮೇಲೆ
ಪಿಚ್ಚಿನಲ್ಲಿ ಇಬ್ಬರೂ ಭೇಟಿಯಾಗುವರು
ನಂತರ ವಿಕೆಟುಗಳನ್ನು ಹೆಕ್ಕಿ ತಬ್ಬಿಕೊಂಡು
ದಾಪುಗಾಲುಗಳನ್ನು ಹಾಕುತ್ತ ನಿಷ್ಕ್ರಮಿಸುವರು


ಇಬ್ಬನಿಯಾದರೋ ನೆಲಕ್ಕೆ ತೆಳ್ಳಗಿನ ಮುಸುಕು ಹಾಕುತ್ತಿದೆ
ಆಕಾಶದಲ್ಲಿ ನಾಲ್ಕಾರು ನಕ್ಷತ್ರಗಳು ಬಿದ್ದಿವೆ
ಆಲಸಿಗಳಾದ ಕತ್ತೆಗಳು ಮಾತ್ರ ಯಾವುದನ್ನೂ ಗಮನಿಸದೆ
ನಿಶ್ಚಲವಾಗಿ ನಿಂತಿವೆ
ಅಷ್ಟರಲ್ಲಿ ರಾಮುಲುವೂ ಸೋಮುಲುವೂ
ಮತ್ತೆ ಪ್ರವೇಶಿಸುವರು
ನೆಟ್ಟದೃಷ್ಟಿಯಿಂದ ಪಿಚ್ಚಿನ ಕಡೆಗೆ ದಪದಪನೆ ಧಾವಿಸುವರು
ಅದರ ಹುರಿಹಾಸನ್ನು
ಎಡಗಡೆಯಿಂದೊಬ್ಬ, ಬಲಗಡೆಯಿಂದೊಬ್ಬ
ಎತ್ತಿ ಸುತ್ತಲು ಮನಸ್ಸು ಮಾಡುವರು
ಸುತ್ತುತ್ತ ಉರುಳುರುಳಾಗಿ ಬೆಳೆಯುತ್ತಿರುವ ಹಾಸಿನ
ಉರುಳಿಗೆ ಕೈಗಳನ್ನೂ ನೆಲಕ್ಕೆ ಕಾಲುಗಳನ್ನೂ
ಊರಿ ನೂಕಿ ಸೆಟೆದು ಮುಗ್ಗರಿಸಿ ಬೀಳುವರು
ಕೆಳಗೊಬ್ಬ, ಮೇಲೊಬ್ಬ
ಬಿದ್ದರೂ ಬಿಡದೆ, ಕೈ ಬದಲಾಯಿಸುತ್ತ, ಏದುತ್ತ
ಎತ್ತಿ ಎಳೆದು ದೂರಕ್ಕೆ ಸಾಗಿಸುವರು


ಜನವರಿಯ ಇರುಳಾದರೋ ಯಥೇಷ್ಟ ಹೆಪ್ಪುಗಟ್ಟುತ್ತಿದೆ
ಮೈದಾನು ಯಾವುದು, ಮರ ಯಾವುದು ಗೊತ್ತಾಗುವುದೆ ಕಷ್ಟ
ಅಷ್ಟರಲ್ಲಿ ರಾಮುಲುವೂ ಸೋಮುಲುವೂ
ಭಾರವಾದ ಕೂಜೆಗಳನ್ನು ಎತ್ತಿಕೊಂಡು ಬಿಡದೆ ಪ್ರವೇಶಿಸುವರು
ಕುಸಿದುಹೋಗುತ್ತಿರುವ ಕಾಲುಗಳನ್ನು ಲೆಕ್ಕಿಸದೆ
ಪಿಚ್ಚಿನ ಕಡೆಗೆ ಚುರುಕಾಗಿ ಪುಟಪುಟನೆ ಹೆಜ್ಜೆ ಹಾಕುವರು
ಬಾಯಲ್ಲಿ ಒಂದೊಂದು ಬೀಡಿ
ಜೋಡಿ ನಕ್ಷತ್ರಗಳಂತೆ ಉರಿಯುತ್ತ
ರಾಮುಲುವೂ ಸೋಮುಲುವೂ
ಧೂಳೆಬ್ಬಿಸಿ ಸುಸ್ತಾಗಿ ಮಲಗಿದ ಬಯಲ ಮೈಗೆ
ನೀರು ಸಿಂಪಡಿಸಲು ತೊಡಗುವರು
ಕ್ರಮೇಣ ದಟ್ಟವಾದ ಕತ್ತಲು ಎಲ್ಲವನ್ನೂ ಆವರಿಸುವುದು
ಸ್ವಲ್ಪ ಹೊತ್ತಿನಲ್ಲೆ ಒಂದು ಬೀಡಿ ನಂದುವುದು
ನಂತರ ಇನ್ನೊಂದು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...