ಅವರು

ಅವನ ಅನೇಕ ಹೆಂಡಂದಿರಿದ್ದರಲ್ಲ
ಅವರೇನಾದರು?

ಅವರೆ?  ಕೆಲವರು ಅವರವರ ಹುಟ್ಟೂರಿಗೆ
ಹೊರಟುಹೋದರು.  ಇನ್ನು ಯಾರನ್ನೋ
ಆಶ್ರಯಿಸಿದರು.  ಕೆಲವರು ಚಾರ್‌ಮಿನಾರಿನ
ಸಮೀಪ ಮಾಲೆಗಳನ್ನು ಕಟ್ಟಿ ಮಾರತೊಡಗಿದರು.
ಹಳೆ ನಗರದ ಧೂಳು ಎಲ್ಲಾ ಹೂವುಗಳ ಮೇಲೂ
ಕುಳಿತಿದೆ.

ಕೆಲವರು ನರ್ತಕಿಯರಾದರು.  ಸ್ಪರ್ಶಕ್ಕೆ ನಾಚಿದರು.
ನಿಜಕ್ಕೂ ಪ್ರೇಮಿಸಿದರು.  ಬೇರೆ ರೀತಿಯಿಂದ
ಬೇರೆ ಜನರೆದುರು ಹಾಡಿದರು.  ಆಗಿಂದಾಗ್ಗೆ ಸತ್ತ
ಇವರ ಗೋರಿಯನ್ನು ಯಾರೂ ಕಟ್ಟಿಸಲಿಲ್ಲ.

ಇನ್ನು ಕೆಲವರು ಕೊನೆಯಿಲ್ಲದ ಗಲ್ಲಿಗಳಾದರು
ನೀವು ಮೆಟ್ಟುವ, ನೀವು ಹುಡುಕುವ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಂದ್ರನ ಗೋಳು
Next post ಅಕ್ಕನೊಂದಿಗೆ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…