ಆರ್ಟ್ಸ್ ಕಾಲೇಜಿನ ಹಾದಿಯಲ್ಲಿ

ಇಲ್ಲಿ ಗುಲ್ಮೊಹರ್‍ ಹೂವುಗಳು ದಟ್ಟವಾಗಿ ಬೀಳುತ್ತಿವೆ.
ತಂಪಾದ ಗಾಳಿಗೆ ಮುಂಗುರುಳುಗಳೂ ಇಷ್ಟಬಂದಂತೆ ಹಾರುತ್ತಿವೆ.
ಅವಗುಂಠನ ಹಾಕಿದ ಯುವತಿಯರ ಕಣ್ಣುಗಳಾದರೋ
ಏನೋ ಹೇಳುವ ಹಾಗಿವೆ.
ಮರದ ಕೆಳಗೆ ಕುಳಿತ ಹುಡುಗನೂ ಹುಡುಗಿಯೂ
ಸುಮ್ಮಸುಮ್ಮನೆ ನಗುತ್ತಿದ್ದಾರೆ.
ಬಸ್ ನಿಲ್ದಾಣದ ಪಾನ್‌ವಾಲ ಶುದ್ಧ ದಖ್ಖಣದ ಉರ್ದುವಿನಲ್ಲಿ
ಅಸ್ಖಲಿತವಾಗಿ ಮಾತಾಡುತ್ತಿದ್ದಾನೆ.
ಇಂಥ ಆರ್ಟ್ಸ್ ಕಾಲೇಜಿನ ಹಾದಿಯಲ್ಲಿ ನಾನು
ದಿನವೂ ನಡೆಯುತ್ತೇನೆ.

ಏನು, ಇಲ್ಲಿ ಹೈದರಾಬಾದಿನ ಸೆಖೆ ಹೊಡೆಯುವುದಿಲ್ಲವೆ?
ನರಳುವುದಿಲ್ಲವೆ ಇಲ್ಲಿ ಯಾರೂ?
ಎಂದು ನೀವು ಕೇಳಬಹುದು.
ಯಾಕೆ, ನನಗೆ ಆಯ್ಕೆಯ ಸ್ವಾತಂತ್ರ್‍ಯವಿಲ್ಲವೆ?
ಅಥವಾ ಇಲ್ಲವೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಳುವೆ ಮಾಡೋದು
Next post ಕ್ಲಿಂಟನ್

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…