ವಾರಿಜಾಕ್ಷಿ ವನಪಿನೊಯ್ಯಾರೆ

ವಾರಿಜಾಕ್ಷಿ ವನಪಿನೊಯ್ಯಾರೆ
ಬಾರೆ ನೀರೆ ನಿನ್ನನಗಲಿರಲಾರೆ || ಪ ||

ದೀರೆ ಮರೆಯದಿರಲಾರೆ ಬ್ರಹ್ಮದ
ನೀರು ತುಂಬಿದ ಕೆರಿಯ ಮೇಲಿನ
ಏರಿಯೊಳು ನೀ ಬಾರದಿಹೆ ನಾ
ದಾರಿಯೊಳು ತರುಬಿದರೆ ಸುಮ್ಮನೆ ||ಅ.ಪ.||

ಹರನಾ ಹಿಡಿದೆ ವಿಧಿ ತಲಿಗಡಿದೆ
ಹರಿಯ ಚರಣಾಂಬುಜವನ್ನು ಪಡಿದೆ
ಪರಮನಾರದಋಷಿಯ ಕಲಹದಿ
ಪರಿಯಗೆಡಸಿದಿ ಪಾವನಾತ್ಮಳೆ
ಧರಿಗೆ ಶಂಕರಿಯಾದೇ ಶಿವನಾ
ಶಿರದಿ ಮೆರದೇ ಗಂಗೆಯಾಗಿ ||೧||

ಹಸಿತ ವದನದ ಕುಸುಮಗಂಧಿಯಳೆ
ವಸುಧಿ ದೆಸೆಗೆಡಿಸುತ್ತ ನಿಂತಿಹಳೆ
ಎಸೆವ ಶಿಶುನಾಳೇಶನ ಹಸುಳೆಗೆ
ಅಸಮ ಹಾದರ ಕಲಿಸಿದ್ಯಾ ಬಿಡು
ರಸಿಕರಾಟ ಗೋವಿಂದ ಸದ್ಗುರು
ಉಸುರಿದಾತ್ಮ ವಿಚಾರ ತಿಳಕೋ ||೨||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುಗ್ಗುಳ ಹೊರಟಿತಮ್ಮಾ
Next post ಹುಡಕುತ ನಾ ಎಲ್ಲಿ ಹೊಗಲಿ?

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…