ರೆನೆಯನ್ನು ಕಂಡಮೇಲೆ ನನ್ನ ಜೀವನದ ದೃಷ್ಟಿಕೋನವೇ
ಬದಲಾಯಿತು-ಎನ್ನುವುದು ಹೇಗೆ? ಯಾವುದೂ
ಅಷ್ಟು ಬೇಗನೆ ಬದಲಾಗುವುದಿಲ್ಲ. ಉದಾಹರಣೆಗೆ
ಅಬೀಡ್ಸಿನಲ್ಲಿ ಸಂಜೆಯಾಗುವುದು ನಮೆಗೆ ಗೊತ್ತಾಗುವುದೆ ಇಲ್ಲ.
ಅಂಗಡಿಯವರು ಒಬ್ಬೊಬ್ಬರಾಗಿ ಬೆಳಕು ಹಾಕುವ ನಿಮಿಷ
ನಾವು ಗಮನಿಸುವುದೆ ಇಲ್ಲ. ಬೇಕೆಂದಾಗ ಸಮಯವನ್ನು
ಸ್ಥಗಿತಗೊಳಿಸಬಲ್ಲೆವಾದ್ದರಿಂದಲೆ ನಾವು ವಾಹನಗಳ ದಟ್ಟಣೆಯಲ್ಲೂ
ಬೀದಿ ದಾಟಬಲ್ಲೆವು-ಎಲ್ಲವನ್ನೂ ಬಿಟ್ಟು ಒಂದು ರೆಸ್ಟುರಾ ಹೊಕ್ಕು
ನಮ್ಮಷ್ಟಕ್ಕೆ ಇರಬಲ್ಲೆವು. ಬುದ್ಧನು ಕೂಡ ದಾಟಿದ್ದ
ಬುದ್ಧನಾಗುವುದಕ್ಕೆ ಹಲವು ಬೀದಿಗಳನ್ನು.
*****
Related Post
ಸಣ್ಣ ಕತೆ
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
-
ಬಲಿ
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
-
ಎರಡು ಪರಿವಾರಗಳು
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…