Home / ಕವನ / ಕವಿತೆ / ದೊಡ್ಡ ಜನರು

ದೊಡ್ಡ ಜನರು

ಈ ಕಿಟಕಿ ಈ ಬಾಗಿಲುಗಳ ಹಲಸು ಬೀಟೆ ಹೆಮ್ಮರಗಳನ್ನು
ಹಳೆ ಕಾಡುಗಳಿಂದ ಉರುಳಿಸಿದರು.  ಚಿತ್ತಾರದ ಮಂಚಗಳನ್ನು
ಪಳಗಿದ ಕೆಲಸದವರಿಂದ ಮಾಡಿಸಿದರು.  ನೆಲಕ್ಕೆ ಹಾಸಿದ ಬಣ್ಣಬಣ್ಣದ
ಕಲ್ಲುಗಳನ್ನು ಬಹುದೂರದಿಂದ ತರಿಸಿದರು.  ಪಡಸಾಲೆಯಲ್ಲಿ ತೂಗಿದ
ಬೃಹತ್ತಾದ ತೈಲಚಿತ್ರಗಳು ಹಿರಿಯರದು.  ಆ ಮೂಲೆಯಲ್ಲೊಂದು
ಎರಕದ ಬುದ್ಧ. ಇಲ್ಲೊಂದು ಕಪ್ಪು ಶಿಲೆಯ ಗೊಮ್ಮಟ.
ದೊಡ್ಡ ಜನರು ದೊಡ್ಡ ಮನೆಗಳಲ್ಲಿ ವಾಸ ಮಾಡುತ್ತಾರೆ.

ಸರ್ವಸೇವಾ ಸಂಸ್ಥೆಯ ಅಧ್ಯಕ್ಷಿಣಿ ಕಾಮಾಕ್ಷಮ್ಮ
ನೆಲ ಮುಟ್ಟಿದ್ದೆ ಅಪರೂಪ.  ಚಿನ್ನದ ಬಣ್ಣದ ಸಾಂಡಲುಗಳನ್ನು
ಸ್ನಾನಗೃಹದ ಹೊರಗೊಮ್ಮೆ, ಶಯನಗೃಹದ ಒಳಗೊಮ್ಮೆ
ತೆಗೆಯುತ್ತಾರಷ್ಟೆ. ಮತ್ತೆ ಒಂದು ರಾಬಿನ್ಸನೊಂದಿಗೇ
ಒಂದು ಭೈರಪ್ಪನೊಂದಿಗೋ ಮೆತ್ತೆಯಲ್ಲಿ ಮಲಗಿ ನಿದ್ದೆಹೋದರೆ
ಎಬ್ಬಿಸಬೇಕು ಅಡಿಗೆಯವಳು ಅಥವ ಸ್ಥಳೀಯ ಮುಖಂಡರು.
ದೊಡ್ಡ ಜನರು ದೊಡ್ಡ ಹೆಂಗಸರನ್ನು ಮದುವೆಯಾಗುತ್ತಾರೆ.

ಬೇಸಿಗೆಯ ಇಳಿಹೊತ್ತಿನಲ್ಲಿ ಹೊರಗೆ ಕುಳಿತುಕೊಳ್ಳುವುದು ಆರಾಮ.
ಗುಲ್ಮೊಹರ್‍ ಮರಗಳ ಕೆಳಗೆ ಬೆತ್ತದ ಆಸನಗಳನ್ನು ಹಾಕಿದೆ.
ಟೀಪಾಯಿಯ ಮೇಲೆ ಚಹಾದ ಕೆಟ್ಟಲು ಕಪ್ಪುಗಳು.
ಸೆಕೆಗಾಲದಲ್ಲಿ ಲಿಂಬೆಹಣ್ಣಿನ ಚಹಾವನ್ನೆ ಎಲ್ಲರೂ ಇಷ್ಟಪಡುತ್ತಾರೆ.
ಮಾನವೀಯ ಹಕ್ಕುಗಳೆ? ನೇಪಾಳವನ್ನು ತಗೊಳ್ಳಿ, ಉದಾಹರಣೆಗೆ.
ಹಿಂದೆ ನಾನು ಡಾರ್ಜೀಲಿಂಗಿನಲ್ಲಿದ್ದಾಗ ಒಬ್ಬಳು ನೇಪಾಳಿ ಸಿಕ್ಕಿದಳು.
ದೊಡ್ಡ ಜನರು ದೊಡ್ಡ ಸಂಗತಿಗಳನ್ನು ಚರ್ಚಿಸುತ್ತಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...