ನೀರ ಕಪ್ಪೆ, ಮರದ ಕಪ್ಪೆ

ತೋಡುಗಳಿಂದ ಹೊಳೆಗೆ ಹೊಳೆಯಿಂದ ನದಿಗೆ
ಹೋಗುವೆನು.  ಹಲವು ಭೂಖಂಡಗಳ ನದಿಗಳಲ್ಲಿ
ಈಜಾಡುವೆನು.  ಹಲವು ನದಿಗಳ ನೀರು
ಕುಡಿಯುವೆನು.  ಏಳು ಸಮುದ್ರಗಳನ್ನು
ಹೊಗುವೆನು.  ತಿಮಿಂಗಿಲಗಳನ್ನು ನುಂಗುವೆನು.
ನನ್ನ ಮೈಕಾಂತಿಗೆ ನಕ್ಷತ್ರಗಳು
ಅಸೂಯೆಗೊಳ್ಳುವುದಿದೆ.  ಮುಳುಗಿದ ಹಡಗುಗಳಿಂದ
ನಾನೊಂದು ತಂತಿ ವಾದ್ಯವನ್ನು ಮಾಡಿ
ನುಡಿಸುವುದಿದೆ.

ಎಲ್ಲ ಸಾಧನೆಗಳನ್ನೂ ತಿರಸ್ಕರಿಸುತ್ತಲೇ ಬಂದವನು
ನಾನು.  ನೀರಿನಿಂದ ನೆಲಕ್ಕೆ ನೆಲದಿಂದ
ಮರಕ್ಕೆ.  ಏರುವವನಿಗೇತರ ಮಿತಿ?
ತಿರುಗಿ ನೋಡದ ಗತಿಗೆ ಹೊಸ ಹೊಸ
ಕ್ಷಿತಿಜಗಳು ಕಾಣಿಸುತ್ತಲೇ ಇರುವುವು.
ರೆಕ್ಕೆಗಳು ಬರುವುದಿದೆ ನನಗೆ-ದೊಡ್ಡ ದೊಡ್ಡ
ರೆಕ್ಕೆಗಳು.  ಆಕಾಶದಲ್ಲಿ ಹಾರುತ್ತ
ಇಡೀ ಲೋಕವನ್ನೇ ನಾನು ಕತ್ತಲೆಯಲ್ಲಿ
ಕೆಡಹುವುದಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಹೇಬರು ಎಲ್ಲಿ
Next post ನಿದ್ದೆ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…