ಹುಡಕುತ ನಾ ಎಲ್ಲಿ ಹೊಗಲಿ?

ಹುಡಕುತ ನಾ ಎಲ್ಲಿ ಹೊಗಲಿ?
ಹುಡುಕಿ ನಾ ಬ್ಯಾಸತ್ತೆ ||ಪ||

ಏಳು ಸಮುದ್ರಗಳು ಏಳು ದಿವಸಗಳು
ಹಾಳು ಬಿದ್ದವು ಕೇಳಿ ಕೇಳಿ ಬ್ಯಾಸತ್ತೆ
ನದಿಗಳೆಲ್ಲಾ ಹುಡುಕಿ ಬ್ಯಾಸತ್ತೆ
ಉದಕ ತುಂಬಿದ ಭಾವಿ ನದರಿಟ್ಟು ನೋಡಿದೆ ||೧||

ಧರಿಯೆಲ್ಲ ತಿರುಗಿದೆ
ಗಿರಿಯೆಲ್ಲಾ ಚರಿಸಿದೆ
ಸರಸಿಜಸಖಿಯೆ
ಪರಮಾತ್ಮ ಸಿಗಲಿಲ್ಲ ||೨||

ಕಡಿಯ ಭಾಗದಿ ನಾನು
ಸುಡುಗಾಡ ಹುಡುಕಿದೆ
ನಡು ಊರೊಳು ಬಂದು
ಮಿಡಕ್ಯಾಡಿ ನೋಡಿದೆ ||೩||

ಸಣ್ಣವಳಿರುತಲಿ
ಬಣ್ಣಿಸಿ ಬಹು ಜನ
ಹಣ್ಣು ಸಕ್ಕರೆ ಕೊಟ್ಟು
ಉಣ್ಣಿಸಿದರು ಎನ್ನ ||೪||

ಶಿಶುನಾಳಧೀಶನ
ಅಸಮ ಜರಿ ರಾಗವನ್ನು
ಶಶಿಮುಖಿ ಕಾಣದೆ
ಕಸಿವಿಸಿಗೊಳ್ಳುವೆ ||೫||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾರಿಜಾಕ್ಷಿ ವನಪಿನೊಯ್ಯಾರೆ
Next post ಗ್ರಹಣ ಹಿಡಿದುದು ಕಾಣದೆ?

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…