Home / ಕವನ / ಕವಿತೆ / ಏಡಿಗಳು (ಸಮುದ್ರತೀರದ)

ಏಡಿಗಳು (ಸಮುದ್ರತೀರದ)

ಸಮುದ್ರ ಕಿನಾರೆಯಲ್ಲಿ ಎಲ್ಲಿ ದೊಡ್ಡ ದೊಡ್ಡ ಅಲೆಗಳು
ಗೋಧಿಬಣ್ಣದ ಮರಳುಗಳನ್ನು ತಂದುಹಾಕಿವೆಯೋ
ಅಲ್ಲಿ ಅದೇ ಬಣ್ಣದ ಏಡಿಗಳು
ಯಥೇಷ್ಟ ಓಡಾಡುತ್ತವೆ.

ಎಷ್ಟು ಚಿಕ್ಕವಿವೆ ಇವು ಎಂದರೆ
ಒಂದು ಅಂಗಿಜೇಬಿನಲ್ಲಿ ಸುಮಾರು
ಒಂದು ನೂರನ್ನು ಸುಲಭವಾಗಿ
ತುಂಬಬಹುದು.

ಹಿಡಿಯಬಹುದಾದರೆ ಮಾತ್ರ.  ಕಾರಣ
ಮನುಷ್ಯರನ್ನು ಕಂಡರೆ ಇವು
ಮರಳಿನೊಳಕ್ಕೆ ನುಗ್ಗಿ
ಮಾಯವಾಗಿಬಿಡುತ್ತವೆ.

ಮೇಲೆ ಹಾದ ತೆರೆಗೆ ಇನ್ನೇನು ಕೊಚ್ಚಿಹೋದವು
ಎಂದು ನೀವು ನೆನೆದರೆ
ಇವು ಮಾತ್ರ ಮರಳಿನಿಂದ ಹೊರಬರುತ್ತವೆ
ಏನೂ ಆಗದವರಂತೆ!

ಒಂದೆರಡುಮೂರು ನೂರು-ಲೆಕ್ಕಕ್ಕೆ ಸಿಗದಷ್ಟು.
ಒಂದರಿಂದ ಇನ್ನೊಂದು ಪ್ರತ್ಯೇಕಿಸಲಾರಿರಿ.
ಎಲ್ಲ ಏಡಿಗಳೂ ಒಂದೇ ಥರ ನಮ್ಮ
ಕಣ್ಣಿಗೆ. ಹೇಗೆಂದರೆ:

ಒಂದು ವೇಳೆ ನಾವೀಗ ಇಂಥದೇ ಏಡಿಗಳಾಗಿರುತ್ತಿದ್ದರೆ
ಸಂಜೆ ವಾಯುಸೇವನೆಗೆಂದು ಹೊರಟ
ಈ ನಗರಸಭಾಪತಿಗಳನ್ನು ಪ್ರತ್ಯೇಕವಾಗಿ
ಗುರುತಿಸುತ್ತಿದ್ದೆವೆ?
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...