ಚಿಟ್ಟೆಗಳನ್ನು ಹಿಡಿಯುವುದು

ಚಿಟ್ಟೆಗಳನ್ನು ಹಿಡಿಯುವುದಕ್ಕೆ ಮೊದಲು
ಒಂದು ಹೂದೋಟ ಬೇಕು, ಹೂದೋಟದಲ್ಲಿ
ಹೂವುಗಳು ಬೇಕು, ಹೂವುಗಳಲ್ಲಿ
ಚಿಟ್ಟೆಗಳು ಕೂತುಕೊಳ್ಳಬೇಕು.

ಈಗ ಹೊರಡಿರಿ ಮೆಲ್ಲನೆ. ಎಷ್ಟು
ಮೆಲ್ಲನೆ ಎಂದರೆ ಒಣಗಿದ ಸೊಪ್ಪುಗಳ ಮೇಲೆ
ಬೆಕ್ಕು ನಡೆಯುವ ಹಾಗೆ.  ಮುಂದೆ
ದೊಡ್ಡ ಡೇಲಿಯಾ ಉಂಟು.  ಅದರಲ್ಲಿ

ಶುದ್ಧ ಹಳದಿಯ ಚಿಟ್ಟೆಯುಂಟು.  ಆಚೀಚೆ
ನೋಡಬಾರದು, ಕೈಗಳು ನಡುಗಬಾರದು.
ಈಗ ಚಿಟ್ಟೆಯಲ್ಲದೆ ಬೇರೇನೂ ಇಲ್ಲ
ಈ ಜಗತ್ತಿನಲ್ಲಿ, ನಿಮ್ಮ ಮನಸ್ಸಿನಲ್ಲಿ.

ಆಯಿತೆ?  ಎರಡು ಬೆರಳುಗಳ ಮಧ್ಯೆ
ಅದು ಸಿಕ್ಕಿಬಿತ್ತೆ?  ವದ್ದಾಡುತ್ತಿದೆಯೆ?
ಅದರ ರೆಕ್ಕೆಗಳು ಹರಿಯುತ್ತಿವೆಯೆ?  ಏನು,
ಬಿಟ್ಟುಬಿಟ್ಟರೆ?  ಹಾಗಿದ್ದರೆ

ಬೆರಳುಗಳಿಗಂಟಿದ ಬಣ್ಣವನ್ನು,
ಮತ್ತು ರೆಕ್ಕೆಯ ಚೂರುಗಳನ್ನು
ಒರೆಸಿಕೊಳ್ಳಿರಿ-ನಿಮ್ಮ ಬಟ್ಟೆಗೆ, ಮೈಗೆ,
ಅಥವಾ ಇನ್ನೆಲ್ಲಿಗೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯ ಬರಲೇ ಇಲ್ಲ
Next post ನೆನಪು ನೆನಪು ನೆನಪು

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…