ಚೇಳೂ ಏಡಿಯೂ

ಚೇಳಿನ ಮೈ ತಾಮ್ರದ ಕಿಲುಬಿನ ಹಾಗೆ
ಕಡುಪಚ್ಚೆ.  ಏಡಿಯ ಮೈ ಶ್ರೀಮಂತೆಯ
ಉಗುರಿನ ಹಾಗೆ ನಸುಗೆಂಪು.

ಚೇಳು ಒಂದೇ ಶಿಲೆಯಿಂದ ಕೆತ್ತಿ
ಕಡೆದು ತೆಗೆದಂತಿದೆ.  ಏಡಿಯ ಕೈಕಾಲುಗಳು
ಹೊಲಿದು ಸೇರಿಸಿದಂತಿವೆ.

ಚೇಳು ಭಯೋತ್ಪಾದಕನಂತೆ ನಿಶ್ಚಿಂತೆಯಿಂದಿದೆ.
ಏಡಿ ನಿರಾಯುಧನಂತೆ ಯಾವಾಗಲೂ
ಅಂಜಿಕೊಂಡೇ ಇರುತ್ತದೆ.

ಚೇಳು ಹೇಗೆ ಮಂದರಿಯಬಲ್ಲುದೋ ಹಾಗೆ
ಹಿಂಜರಿಯುತ್ತದೆ ಕೂಡ.  ಏಡಿ ಅಡ್ಡಾದಿಡ್ಡಿ
ಓಡಿ ಅಡಗಲು ಪ್ರಯತ್ನಿಸುತ್ತದೆ.

ಆದರೆ ಚಾಣಾಕ್ಷರಾದ ಮನುಷ್ಯರು ಮಾತ್ರ
ಒಂದನ್ನು ಕೊಂಡಿ ಕಳಚಿ ತಿಪ್ಪೆಗೆಸೆಯುತ್ತಾರೆ.  ಇನ್ನೊಂದನ್ನು
ಹುಡುಕಿ ಹಿಡಿದು ಹೊಟ್ಟೆಗೆ ಕಳಿಸುತ್ತಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯ ಅನ್ನೋ ಪ್ರಾಣಿ
Next post ಅಂದುಕೊಂಡಷ್ಟು…..

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…