ಗಾಂಧಿಗೆ

ಕೆಲವು ವರ್ಷಗಳ ಹಿಂದೆ ರೇಲ್ವೇಸ್ಟೇಷನಿನ ಕ್ಯಾಂಟೀನಿನಲ್ಲಿ
ಚಹಾ ಕುಡಿಯುತ್ತಿರುವಾಗ ಬಟ್ಟಲಿನಲ್ಲಿ
ಗಾಂಧಿ ಟೋಪ್ಪಿಗೆ ಕಂಡು ಚಕಿತನಾದೆ.  ಆಗ
ಆ ಕುರಿತು ಆಲೋಚಿಸಲು ಸಮಯವಿರಲಿಲ್ಲ.
ಅವಸರವಸರವಾಗಿ ಮಂದಿಯ ಮಧ್ಯೆ ಓಡೋಡಿ
ಗಾಡಿ ಹತ್ತಿದೆ.  ನಿಂತವರ ನಡುವೆ ನಿಂತೆ.
ಮೊದಮೊದಲು ನಿಧಾನಗತಿ
ಮತ್ತೆ ಉಕ್ಕಿಗೆ ಉಕ್ಕು ಸಂಧಾನಶ್ರುತಿ
ನನ್ನ ಮಸ್ತಿಷ್ಕಕ್ಕೆ ಹೊಕ್ಕು ಹೊರಟು ಚಕ್ರಾರಪಂಕ್ತಿ
ಯುಗ ಮುಗುಚುತ್ತದೆ
ಬೆರಳುಗಳು ಬೇರುಗಳಾಗಿ ಒಡೆಯುತ್ತವೆ
ಕಣ್ಣಗುಡ್ಡೆಗಳು ನಕ್ಷತ್ರಗಳಾಗಿ ಸಿಡಿಯುತ್ತವೆ
ಎರಡೂ ಕೊನೆಗಳಲ್ಲಿ ಬಹುಶಃ ನಾವು ಸಂಧಿಸುತ್ತೇವೆ.

ಜನರ ಮತ್ತು ದೈವಗಳ ನಡುವೆ
ಆರಿಸುವುದು ಕಷ್ಟ
ನಿನಗೆ ಮನುಷ್ಯರ ಹಿಂದಿನ ದೇವರು ಬೇಕು
ನನಗೆ ದೇವರ ಮುಂದಿನ ಮನುಷ್ಯರು ಮಾತ್ರ ಸಾಕು
ನೀನು ನೋಖಾಲಿಯ ಹಿಂದೆ
ನಾನು ಢಾಕ್ಕಾದ ಮುಂದೆ
ನಿನಗೆ ರಾಮನ ಬಳಿಗೆ ಐದೇ ನಿಮಿಷ
ನನಗೆ ಆನ್ವೇಷಣೆಯ ಅನೇಕ ವರುಷ
ದೇವರನ್ನು ಕಳೆದುಕೊಂಡ ನಾನು
ಈ ಭೂಮಿಯಲ್ಲಿ ನೆಲೆಯಿಲ್ಲದೆ ಅಲೆಯುತ್ತಿದ್ದರೂ ಬಿಡದೆ
ಅಕ್ಟೋಬರ್‍ ಎರಡರಂತೆ ಮತ್ತೆ ಮತ್ತೆ ನನ್ನಲ್ಲಿ
ಹುಟ್ಟುತ್ತಿರುವೆಯಲ್ಲಾ, ಗಾಂಧಿ!
ಮಳೆ ಬಿಸಿಲಿಗೆ ನಿಂತ ನಿನ್ನ ನೂರಿನ್ನೂರು ಪ್ರತಿಮೆಗಳಂತೆ
ನಾನೂ ಮಾಸುತ್ತೇನೆ
ಯಥೇಚ್ಫ ಮೌನದಲ್ಲಿ
ಬುದ್ಧಭಗವಾನನ ಕಣ್ಣಿನಲ್ಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯನ ಪ್ಲಾನು
Next post ನಾವು

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…