Home / ಕವನ / ಕವಿತೆ / ಗಾಂಧಿಗೆ

ಗಾಂಧಿಗೆ

ಕೆಲವು ವರ್ಷಗಳ ಹಿಂದೆ ರೇಲ್ವೇಸ್ಟೇಷನಿನ ಕ್ಯಾಂಟೀನಿನಲ್ಲಿ
ಚಹಾ ಕುಡಿಯುತ್ತಿರುವಾಗ ಬಟ್ಟಲಿನಲ್ಲಿ
ಗಾಂಧಿ ಟೋಪ್ಪಿಗೆ ಕಂಡು ಚಕಿತನಾದೆ.  ಆಗ
ಆ ಕುರಿತು ಆಲೋಚಿಸಲು ಸಮಯವಿರಲಿಲ್ಲ.
ಅವಸರವಸರವಾಗಿ ಮಂದಿಯ ಮಧ್ಯೆ ಓಡೋಡಿ
ಗಾಡಿ ಹತ್ತಿದೆ.  ನಿಂತವರ ನಡುವೆ ನಿಂತೆ.
ಮೊದಮೊದಲು ನಿಧಾನಗತಿ
ಮತ್ತೆ ಉಕ್ಕಿಗೆ ಉಕ್ಕು ಸಂಧಾನಶ್ರುತಿ
ನನ್ನ ಮಸ್ತಿಷ್ಕಕ್ಕೆ ಹೊಕ್ಕು ಹೊರಟು ಚಕ್ರಾರಪಂಕ್ತಿ
ಯುಗ ಮುಗುಚುತ್ತದೆ
ಬೆರಳುಗಳು ಬೇರುಗಳಾಗಿ ಒಡೆಯುತ್ತವೆ
ಕಣ್ಣಗುಡ್ಡೆಗಳು ನಕ್ಷತ್ರಗಳಾಗಿ ಸಿಡಿಯುತ್ತವೆ
ಎರಡೂ ಕೊನೆಗಳಲ್ಲಿ ಬಹುಶಃ ನಾವು ಸಂಧಿಸುತ್ತೇವೆ.

ಜನರ ಮತ್ತು ದೈವಗಳ ನಡುವೆ
ಆರಿಸುವುದು ಕಷ್ಟ
ನಿನಗೆ ಮನುಷ್ಯರ ಹಿಂದಿನ ದೇವರು ಬೇಕು
ನನಗೆ ದೇವರ ಮುಂದಿನ ಮನುಷ್ಯರು ಮಾತ್ರ ಸಾಕು
ನೀನು ನೋಖಾಲಿಯ ಹಿಂದೆ
ನಾನು ಢಾಕ್ಕಾದ ಮುಂದೆ
ನಿನಗೆ ರಾಮನ ಬಳಿಗೆ ಐದೇ ನಿಮಿಷ
ನನಗೆ ಆನ್ವೇಷಣೆಯ ಅನೇಕ ವರುಷ
ದೇವರನ್ನು ಕಳೆದುಕೊಂಡ ನಾನು
ಈ ಭೂಮಿಯಲ್ಲಿ ನೆಲೆಯಿಲ್ಲದೆ ಅಲೆಯುತ್ತಿದ್ದರೂ ಬಿಡದೆ
ಅಕ್ಟೋಬರ್‍ ಎರಡರಂತೆ ಮತ್ತೆ ಮತ್ತೆ ನನ್ನಲ್ಲಿ
ಹುಟ್ಟುತ್ತಿರುವೆಯಲ್ಲಾ, ಗಾಂಧಿ!
ಮಳೆ ಬಿಸಿಲಿಗೆ ನಿಂತ ನಿನ್ನ ನೂರಿನ್ನೂರು ಪ್ರತಿಮೆಗಳಂತೆ
ನಾನೂ ಮಾಸುತ್ತೇನೆ
ಯಥೇಚ್ಫ ಮೌನದಲ್ಲಿ
ಬುದ್ಧಭಗವಾನನ ಕಣ್ಣಿನಲ್ಲಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...