ಮಹಾಪ್ರಸ್ಥಾನವನ್ನು ಇನ್ನೊಮ್ಮೆ ಓದಿದಾಗ

ಅನಿಸುತ್ತದೆ ನನ್ನ ಕಥಾನಾಕನನ್ನು ಹೀಗೆ
ಒಂಟಿಯಾಗಿ ಬಿಡಬಾರದಾಗಿತ್ತು ಎಂದು.  ಆದರೆ
ಬಿಟ್ಟಿದ್ದನೆಲ್ಲಿ ಇವುನು ನನ್ನನ್ನು ವರ್ಷಗಟ್ಟಲೆ
ಸದಾ ತಲೆಯೊಳಗೆ ಹೊಕ್ಕು ಊಟ ನಿದ್ದೆಗೆ ಬಿಡದೆ
ಮಳೆಗೆ ಸೋರುವ ಬಿಸಿಲಿಗೆ ಸುಡುವ ಬಾಡಿಗೆಮನೆಯಲ್ಲೂ
ಮಂಚದ ಮೇಲೆ ಅಥವ ಧೂಳು ತುಂಬಿದ ಮೇಜಿನಮೇಲೆ
ಎಲ್ಲೆಂದರಲ್ಲಿ ಕಾಗದದ ಚೂರುಗಳಲ್ಲಿ ಅರ್ಧಂಬರ್ಧ
ಇಳಿಸಿಕೊಂಡು ಹೊಡೆದು ಹಾಕಿಸಿಕೊಂಡು ಹೇಗು ಹೇಗೋ
ಮೈಗೂಡಿಸಿಕೊಂಡು ಕ್ರಮೇಣ ತನ್ನ ಸ್ವರ್ಗದ ಆನ್ವೇಷಣೆಯಲ್ಲಿ
ಹೊರಟುಹೋದವನು ಮರಳಿ ಕೈಗೆಟಕುವುದಿಲ್ಲ.

ಅನಿಸುತ್ತದೆ ಹಾಗೆ ಬರೆಯಬಾರದಾಗಿತ್ತು ಬೇರೆ ರೀತಿ
ಹೇಳಬಹುದಾಗಿತ್ತು ಎಂದು.  ಅನಿಸುವ ಹೊತ್ತಿಗಾಗಲೆ
ಕೈಮೀರಿ ಹೋಗಿತ್ತು.  ಹಾಗಾಗುತ್ತದಲ್ಲವೇ ಒಮ್ಮೊಮ್ಮೆ?
ಇಲ್ಲದಿದ್ದರೆಲ್ಲಿಯ ಮಹಾಭಾರತ ಯುದ್ಧ?
ಎಲ್ಲಿಯ ಮಹಾಪ್ರಸ್ಥಾನ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೇಡಾಂದ್ರು ಕೇಳಲ್ಲ
Next post ಕಾಡುಬೆಳದಿಂಗಳು

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys