ಮಹಾಪ್ರಸ್ಥಾನವನ್ನು ಇನ್ನೊಮ್ಮೆ ಓದಿದಾಗ

ಅನಿಸುತ್ತದೆ ನನ್ನ ಕಥಾನಾಕನನ್ನು ಹೀಗೆ
ಒಂಟಿಯಾಗಿ ಬಿಡಬಾರದಾಗಿತ್ತು ಎಂದು.  ಆದರೆ
ಬಿಟ್ಟಿದ್ದನೆಲ್ಲಿ ಇವುನು ನನ್ನನ್ನು ವರ್ಷಗಟ್ಟಲೆ
ಸದಾ ತಲೆಯೊಳಗೆ ಹೊಕ್ಕು ಊಟ ನಿದ್ದೆಗೆ ಬಿಡದೆ
ಮಳೆಗೆ ಸೋರುವ ಬಿಸಿಲಿಗೆ ಸುಡುವ ಬಾಡಿಗೆಮನೆಯಲ್ಲೂ
ಮಂಚದ ಮೇಲೆ ಅಥವ ಧೂಳು ತುಂಬಿದ ಮೇಜಿನಮೇಲೆ
ಎಲ್ಲೆಂದರಲ್ಲಿ ಕಾಗದದ ಚೂರುಗಳಲ್ಲಿ ಅರ್ಧಂಬರ್ಧ
ಇಳಿಸಿಕೊಂಡು ಹೊಡೆದು ಹಾಕಿಸಿಕೊಂಡು ಹೇಗು ಹೇಗೋ
ಮೈಗೂಡಿಸಿಕೊಂಡು ಕ್ರಮೇಣ ತನ್ನ ಸ್ವರ್ಗದ ಆನ್ವೇಷಣೆಯಲ್ಲಿ
ಹೊರಟುಹೋದವನು ಮರಳಿ ಕೈಗೆಟಕುವುದಿಲ್ಲ.

ಅನಿಸುತ್ತದೆ ಹಾಗೆ ಬರೆಯಬಾರದಾಗಿತ್ತು ಬೇರೆ ರೀತಿ
ಹೇಳಬಹುದಾಗಿತ್ತು ಎಂದು.  ಅನಿಸುವ ಹೊತ್ತಿಗಾಗಲೆ
ಕೈಮೀರಿ ಹೋಗಿತ್ತು.  ಹಾಗಾಗುತ್ತದಲ್ಲವೇ ಒಮ್ಮೊಮ್ಮೆ?
ಇಲ್ಲದಿದ್ದರೆಲ್ಲಿಯ ಮಹಾಭಾರತ ಯುದ್ಧ?
ಎಲ್ಲಿಯ ಮಹಾಪ್ರಸ್ಥಾನ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೇಡಾಂದ್ರು ಕೇಳಲ್ಲ
Next post ಕಾಡುಬೆಳದಿಂಗಳು

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…