ಗ್ರಹಣ ಹಿಡಿದುದು ಕಾಣದೆ?

ಗ್ರಹಣ ಹಿಡಿದುದು ಕಾಣದೆ ಪ್ರಾಣ ಸಖಿಯಳೆ
ಜಾಣನಾದ ಚಂದ್ರಮನ ಅಳುಕಿಸಿ
ಕೋಣೆಯೊಳಗೆ ಅವಮಾನಗೊಳಿಸಿತೆ ||೧||

ರಾಹು ಸಿಟ್ಟಲೆ ಬಂದು
ಠಾವು ತಿಳಿಯದೆ ನಿಂದು ತೋಯದ ಗೋನಿಯನು
ಕಾಡಬೇಕೆನುತಲಿ ರೋಹಿಣಿದೇವಿಗೆ ಆಯಾಸಪಡಿಸಿತೆ ||೨||

ಮಂಗಳವಾರ ಒಂದಾದಿ ರಂಗುಮಂಟಪದೊಳು
ಸುಮ್ಮನಾಗಿ ಕೇತುವಿನ ಬಲದೆ
ಬಹು ಸಂಗನಾದ ಸಾರಂಗದೊಳು ||೩||

ಯಂತ್ರ ಮಂತ್ರಿಕರೆಲ್ಲಾ
ಗೊತ್ತುಗೆಟ್ಟಿದ್ದು ಬಲ್ಹೆ
ನಿಂತು ನೋಡಿ ಶಿಶುನಾಳಧೀಶ ತನ್ನಂತೆ ತಾ ನೋಡಿದನವ್ವಾ ||೪||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಡಕುತ ನಾ ಎಲ್ಲಿ ಹೊಗಲಿ?
Next post ಮಳಿ ಬಂತೇ ರಮಣಿ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಕನಸು ದಿಟವಾಯಿತು

    ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…