ಮಳಿ ಬಂತೇ ರಮಣಿ

ಮಳಿ ಬಂತೇ ರಮಣಿ ಮಾಯದ್ದೊಂದು ||ಪ||

ಮಳಿ ಬಂತೇ ರಮಣಿ
ಬೆಳಗು ಮೀರಿತೆ ನಳಿನಲೋಚನೆ
ಮಳಿ ಬಂದಿತು ಛಳಿ ಬಿದ್ದಿತು
ಕಳೆದೋರಿತು ಇಳಿಸ್ಥಳದೊಳು
ಜಲಜಮುಖಿ ಪ್ರಳಯ ಸೂಚನೆ ಇದು ||೧||

ನಾವು ಬರುವ ಹಾದಿ ತಪ್ಪಿ ಸುವಿಚಾರದೋರದೆ
ತೊಯ್ಯದ ಗೊನಿ ತಪ್ಪಲಮನಿ
ಮಾಯದ ಧ್ವನಿ ನ್ಯಾಯದ ಹನಿ
ಆಯಾಸವ ಪಡುತಿಹ ಪರಿ
ಸುಯೋಗವ ನೋಡದೆ ಬಲು ||೨||

ಶಿಶುನಾಳಧೀಶನ ದಯದಿ ಕರಸಿಕೊಂಡಿತೇ
ಭಸಿತ ಋಣವು ನಿಶಿಕಿರಣವು
ದೆಸೆಗೆಡದಾತ್ಮಾನಂದದಿ
ವಿಷಯ ಸಂಭೋಗ ಫಲದಿ
ಹುಸಿಗಾಣದೆ ತುಸು ತುಸು ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗ್ರಹಣ ಹಿಡಿದುದು ಕಾಣದೆ?
Next post ಆಶಾಢ ನಿಬ್ಬಣ ಸೂಶ್ಯಾಡಿ ಬಂತು

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…