Home / ಕವನ / ಕವಿತೆ / ನಮ್ಮೂರ ವಾಡೆ

ನಮ್ಮೂರ ವಾಡೆ

ಅದಽ ಹೋದವರ್ಷ ಬಸವ ಜಯಂತಿಗೆ
ಹೋಗಿದ್ದೆ ನಮ್ಮಜ್ಜಜ್ಜರ (ಪಾಟೀಲರ) ವಾಡೆಗೆ
ಊರಿಗೆಽ ದೊಡ್ಡದು
ಅಗಲಕ್ಕೆ ನೂರು ಉದ್ದಕ್ಕೆ ಎರಡನೂರ ಫೂಟಽರ
ಇರಬೇಕ ಮನಿ
ಈ ಓಣಿಯಿಂದ ಆ ಓಣಿಗೆ ಅಂತ
ಒಂದಽ ಮಾತಿನ್ಯಾಗ ಹೇಳಿದ್ರೂನೂ ಸಾಽಕ
ನಸಿಕಿನ್ಯಾಗ ಒಮ್ಮೆ ಬಾಗಿಲಾ ತೆಗಿದ್ರ
ರಾತ್ರಿಽನ ಮುಚ್ಚಿ ಅಗಳಿ ಹಾಕಾವ್ರು
ಗೌಡರ ದರ್ಬಾರ ಮೊನ್ನ ಮೊನ್ನೆವರೆಗೂ
ಹೇಳಿ ನಮ್ಮ ಅಜ್ಜಿ ಕಣ್ಣಮುಚ್ಚಿಗೊಂತು
ಈಽಗ, ಮನಿ ಅನ್ನೋದು ಗೋಡೌನ ಆಗೈತಿ
ಕಾಕಾ ದೊಡ್ಡಪ್ಪಗೋಽಳ ದೊಡ್ಡ ಸಂಸಾರದಾಗ.
ನಾವಽ ಹೋದಾಗ ಬಂದಾಗರೇಽ
ಇರವಲ್ದ್ಯಾಕ ಅಂತ
ಹೊರಗಿನ ಎರಡು ಮೂರು ಕೋಲಿಗೆ
modern touch up ಮಾಡಿಸಿ
ಕರ್ಟನ್, ಸೋಫಾಸೆಟ್ಟು ಕಲರ್ ಟ.ವಿ.
ಟೆಲಿಫೋನ ಹಾಕಿಸಿ ಮತ್ತೆ
ಇಡ್ಲಿ ಊರಿಗೆ ಬಂದೆ.
ನಡುವ ದಸರಾ ದೀಪಾವಳಿ ಅಂತ
ಮತ್ತೊಮ್ಮೆ ಊರಿಗೆ ಹೋಗಿದ್ನಿ
ಸೋಫಾಮ್ಯಾಲ – ಅದಽ ಹೊಲದಿಂದ ತಂದ
ಕಾಯಿಪಲ್ಲೆ ಗಂಟು, T.V. ಮ್ಯಾಲ –
ಹೊಲದ ಮನಿ ಎಂಜಿನ್ ಮನಿ ಕೀಲಿಗೋಳು
Telephone billನ ಉದ್ದನ ಪಟ್ಟಿ

ಕರ್ಟನ್ ಗೊತ್ತಽ ಹತ್ತಲಿಲ್ಲ,
ಹುಡುಗ್ರು ಪೆನ್‌ಮಸಿ ಬರೆಸಿದ್ರು
ಆಳ ಬಸ್ಯಾ ಟ್ರಾಕ್ಟರ ರಿಪೇರಿ ಮಾಡಿ
ಗ್ರೀಸ ಕೈಯಿಂದ ಒರೆಸಿದ್ದು
ಆಳ ಹೆಂಗಸ್ರು ಬುಟ್ಟಿ ಮರಾ ಒರೆಸಿದ್ದು
ಮನಿ ಹೆಂಸ್ಸ್ರು ಎಣ್ಣಿ ಬೆಣ್ಣಿ ಕೈ ಒರೆಸಿದ್ದು
ಮತ್ತಽ ಮಕ್ಕಳ ಸಿಂಬಳಾ ಒರೆಸಿದ್ದು
ಎಲ್ಲಾ ಕಲಿಗೋಳು ಒಂದೊಂದಾಗಿ
ಕಾಣಾಕ ಸುರುವಾದ್ವು
ರಕ್ತ ನೆತ್ತಿಗೇರಾಕ ಸುರುವಾತು
ಹಂಗಽ ಹಂಗಽ ಹಬ್ಬಾಮುಗಿಸಿ
ಸ್ವಚ್ಛ ಶಿಸ್ತಿನ ಬಗ್ಗೆ ಭಾಷಣಾ ಮಾಡಿ,
ಮತ್ತ ದೋಸಾ ಊರಿಗೆ ಬಂದೆ,
ಈ ವರ್ಷ ಈ ಬಸವ ಜಯಂತಿಗೆ
ನಮ್ಮೂರಾಽಗ ಆದೇಽನ.
ಸೋಫಾ, ಟಿ.ವಿ. ಎಲ್ಲಾ ಮೂಲ್ಯಾಗ ಸರಿಸಿ
ಕಾಳ ಕಡಿ ಸ್ವಚ್ಛ ಮಾಡಾಕ್ಹತ್ತಾರ
ಹಿಂದಿನ ಓಣಿಗೆ ಹತ್ತಿದ ಅಡಗಿ ಮನ್ಯಾಗ
ಹಬ್ಬದ ತಿಂಡಿ ಮಾಡಾಕ್ಹತ್ತಾರ
ನಡುಮನ್ಯಾಗ ಅವರವರ ಮಕ್ಕಳು
ಊರಿಂದ ಕೇರಿಂದ ಬಂದಾವ್ರು
ಸೂಟಿ ಅಂತ ಕುಣಿದಾಡಕ್ಹತ್ತಾರ,
ಹಾಂಽಗ ಅಡುಗೆ ಮನಿಗೆ ಹೋದೆ
ಕರ್ಟನ್‌ ತುಣುಕುಗೋಳು
ಮಸಿ ಅರುವಿ ಆಗ್ಯಾವ
ಡಬ್ಬಿ ಕಟ್ಟಾಽಕ, ಕಾಲ ಒರಸಾಕ
ಹರಿದಾಡಿ ಒಗದ್ದಾರ,
ಆಗಿಂದ ನೋಡಿ ನೋಡಿ
ಪಿತ್ತನೆತ್ತಿಗೇರಿ ಒದರ್‍ಯಾಡಾಕ
ಸುರು ಮಾಡ್ನಿ –
ಪಾಟಿಲ್ರ ವಾಡೆ ಅಂದ್ರಽ ಹಿಂಗಽ ಇರಬೇಕು
ಮಗಳ
ಪ್ಯಾಟ್ಯಾಗಿನ ಬಂಗ್ಲಽ ಹಂಗ ಮಾಡಬ್ಯಾಡ್ರಿ
ಮುಚ್ಚಿ ಬಾಗಿಲಾ ಹಿತ್ತಲ ಬಾಗಿಲಾ
ಯಾವತ್ತೂಽ ತೆಗೆದಿರಲಿ
ಆಳ ಕಾಳ, ಮಕ್ಳ ಮರಿ
ನೆರಿ ಹೊರಿ, ದನಾ ಕರಾ ಎಲ್ಲಾ ಬರ್‍ಲಿ ಹೋಗ್ಲಿ
ತಿಣ್ಣಿ ಉಣ್ಣಿ ಉಡಲಿ
ಅಂದ, ನಮ್ಮಜ್ಜನ ಎರಡನೇ ಹೆಂಡತಿ
ನಮ್ಮಜ್ಜಿ ಪಾರ್ವತವ್ವನ ಮಾತ ಕೇಳಿ
ಗೊದಮೊಟ್ಟೆ ಹಂಗಾಽತ ನನ ಮನಸ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...