Home / ಕವನ / ಕವಿತೆ / ಕೂಡಿ ಕೆಳೆಯುವ ಆಟ

ಕೂಡಿ ಕೆಳೆಯುವ ಆಟ

ನನಗೆ ಅರವತ್ತು ವರ್ಷ
ನಮ್ಮವರಿಗೆ ಎಪ್ಪತ್ತು
ಏನೋ ಇಬ್ಬರಿಗೂ ಬೇಜಾರಾದಾಗೆಲ್ಲ
ನನ್ನ ಎಪ್ಪತ್ತರಲ್ಲಿ ನಿನ್ನ ಅರವತ್ತು ಕಳೆ
ಉಳಿದ ಹತ್ತರಲ್ಲಿ
ನೀನೈದು ವರ್ಷದವಳು ನಾನೈದು ವರ್ಷದವ
ಬಾ ಎಂದು ಕೈಹಿಡಿದು
ನನ್ನ ಮೊಮ್ಮಕ್ಕಳು ಸಾಕಿರುವ
ನಾಯಿಯ ಮರಿಯ ಹತ್ತಿರವೋ
ಬೆಕ್ಕಿನ ಮರಿಗಳ ಹತ್ತಿರವೋ ಒಯ್ದು
ಮರಿಗಳನ್ನು ನನ್ನ ಹೆಗಲ ಮೇಲೆಯೋ
ಕಾಲ ಹತ್ತಿರವೋ ಹಾಕಿದಾಗ
ಖುಷಿಯಾಗಿ ನನ್ನ ಕಣ್ಣಲ್ಲಿನೀರು ಬರುತ್ತದೆ
ಮೊಮ್ಮಕ್ಕಳು
‘ಹೋ ಅಜ್ಜಿ ಅಜ್ಜಿ ಅಳ್ತಾ ಇದೆ
ಎಂದು ಚಪ್ಪಾಳೆ ತಟ್ಟಿ ಆನಂದಿಸುವಾಗ
ನನ್ನವರು ಐದರಲ್ಲಿ ಇನ್ನೊ ಅರ್ಧವಾಗಿ
ಮೊಮ್ಮಕ್ಕಳ ಹಿಂದೆ ಓಡುತ್ತಾರೆ
ಸಂತೋಷದ ಕಣ್ಣೀರು ನನಗೆ ಉಕ್ಕಿ ಬಂದಾಗ
ಅಯ್ಯೋ ಪಾಪ ಅಜ್ಜಿ ಅಳ್ತಾ ಇದೆ, ಎಂದು
ಮೊಮ್ಮಕ್ಕಳೆಲ್ಲ ಮೆತ್ತಗೆ
ಒಳಗೆ ಒಯ್ದು
ಮೆತ್ತನೆಯ ಹಾಸಿಗೆಯ ಮೇಲೆ
ಮಲಗಿಸಿ
ಮಮ್ಮಿ
ಅಜ್ಜಾ- ಅಜ್ಜಿಗೆ ಬಿಸಿ ಕಾಫಿ
ಎಂದು ಆರ್ಡರ್ ಮಾಡಿದಾಗ
ನಾವು ಮೊಮ್ಮಕ್ಕಳಲ್ಲಿ
ಮರಿ ಮಕ್ಕಳಂತೆ ಕರಗಿ ಹೋಗಿದ್ದೆವು.
(ನಮ್ಮ ಪಕ್ಕದ ಮನೆಯ ಅಜ್ಜಿ ತನ್ನ ವಿಷಯವಾಗಿ ಒಂದು ಕವನ ಬರೆಯಲು ಹೇಳುತ್ತಿದ್ದರು. ಪ್ರತಿ ಸಲ ಬಂದಾಗ ವಿಚಾರಿಸುತ್ತಿದ್ದರು. ಅವರ ಅರವತ್ತರ ಹುಟ್ಟುಹಬ್ಬಕ್ಕೆ ಅವರ ವಿಷಯವೇ ಬರೆದುಕೊಟ್ಟಾಗ ನಿಜವಾಗಿಯೂ ಅವರ ಕಣ್ಣಲ್ಲಿ ಆನಂದ ಭಾಷ್ಪವು ಬಂದವು)
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...