Home / ಕವನ / ಕವಿತೆ / ಸಾಯದ ಸಾವು ಬದುಕದ ಬದುಕು

ಸಾಯದ ಸಾವು ಬದುಕದ ಬದುಕು

ಕಣ್ಣೊಳಗೆ ನೋಡಿ ಕುಲುಕಾಟವಾಡಿ
ಮಣ್ಣೊಳಗೆ ಬೆರೆವ ತವಕ
ಬಣ್ಣದಲಿ ತೇಲಿ ಕೆಸರಿನಲಿ ಹೊರಳಿ
ತಣ್ಣಗಿದೆ ಎಮ್ಮೆ ಕುಡುಕ

ತಿಂದಿದ್ದ ಒಂದು ಬೆಂದಿದ್ದೆ ಒಂದು
ನಿಂದಿದ್ದೆ ನಿಲುವು ಗೆಲುವು
ಹೊಂದಿದ್ದೆ ನಡೆತ ಗೊಣಗಿದ್ದೆ ತುಡಿತ
ಕಂದಿದ್ದು ಚಿಗುರು ನಲಿವು

ಆಗಸಕೆ ಏರಿ ಚಿಕ್ಕೆಗಳ ಸಾರಿ
ಸೋಗಿನಲಿ ಬೀರಿ ಮೀರಿ
ಬಾಗಿಲನು ಬಡಿದು ನಿದ್ದೆಯಲಿ ನಡೆದು
ಬೇಗೆಯಲಿ ತೊರೆದು ದಾರಿ

ಕಳಸದಲಿ ಪಾನ ಬಳಸದೆಯೆ ಮೌನ
ತುಳುಕಾಡದಂಥ ಬಿಗುವು
ತಳಕಿತ್ತಿ ಬುಟ್ಟಿ ಚೆಲ್ಲಾಡೆ ಬುತ್ತಿ
ಹಳಸಿದ್ದು ನಾಯಿ ನಗುವು

ಓಡುತಿವೆ ಮೋಡ ಬೀಡಿ ಹೊಗೆ ಕೂಡ
ನಾಡಿಯಲಿ ಕಾಲ ಮಾನ
ಬಾಡುತಿಹ ಹೂವು ಬಿದ್ದಿರಲು ಕೆಳಗೆ
ಕಾಡುತಿದೆ ಸ್ಥಾನ ಮಾನ

ನನಗಾಗಿ ನಾನು ನಿನಗಾಗಿ ನೀನು
ಸೊಣಗನದೆ ಬಣಗು ಮೂಗು
ಮನ ಬೆತ್ತಲಾಗೆ ದಿನ ಕತ್ತಲಾಗೆ
ಘನವಾಯ್ತು ಹಗಲ ಸೋಗು

ಎತ್ತೆತ್ತಲಿಂದೊ ಸಂದೇಶ ಬಂದು
ಹತ್ತಿಲೇ ಗುಯ್ಯಿಗುಡಲು
ಹೊತ್ತಲೇ ಇಲ್ಲ ವಿದ್ಯುತ್ತು ಮೈಗೆ
ಮತ್ತೆಲ್ಲೋ ತರಗು ಸುಡಲು

ಭೂಕೇಂದ್ರದಿಂದ ತರತರವ ದಾಟಿ
ಸೋಕುತ್ತ ಬಿಡಲು ಚರ್ಮ
ಆಕಾಶದಿಂದ ನರನರವ ಮೀಟಿ
ಜೀಕುತಿದೆ ದೇವ ಮರ್ಮ

ಮೈಯನ್ನು ಮಣಿಸಿ ಬಾಯನ್ನು ತಣಿಸಿ
ಬೀಯಗವು ಆಯವ್ಯಯವು
ಸಾಯದಿದೆ ಸಾವು ಬದುಕದಿದೆ ಬದುಕು
ನೋಯದಿಹ ಇಹದ ದ್ವಯವು
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...