Home / ಲೇಖನ / ಇತರೆ / ಮಾನವ ನೀನೆಷ್ಟು ಕ್ರೂರಿ ?

ಮಾನವ ನೀನೆಷ್ಟು ಕ್ರೂರಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಕೆಲವೊಂದು ಸನ್ನಿವೇಶಗಳನ್ನು, ದೃಶ್ಯಗಳನ್ನು ನಾವು ಕಣ್ಣಾರೆ ನೋಡದಿದ್ದರೂ ನಮ್ಮ ಮನಸ್ಸು ಅದನ್ನು ಕಲ್ಪಿಸಿಕೊಂಡು ಅತಿಸೂಕ್ಷ್ಮವಾಗಿ ಚಿತ್ರಿಸಿಕೊಂಡಿರುತ್ತದೆ. ಆ ಚಿತ್ರ ನಮ್ಮ ಮನಃಪಟಲವಲ್ಲಿ ಅಚ್ಚೊತ್ತಿ ಸದಾ ಕಾಡುತ್ತಿರುತ್ತವೆ. ಆ ಕೆಲಚಿತ್ರಗಳು….  ಭಾರತೀಯ ಯೋಧರ ಒಂದೊಂದು ಅಂಗಗಳನ್ನೂ ಬೇರ್ಪಡಿಸಿ ಚಿತ್ರಹಿಂಸೆ ನೀಡಿ ಕೊಲ್ಲುತ್ತಿರುವ ಬಾಂಗ್ಲಾದೇಶ ರೈಫಲ್ಸ್ ಪಡೆಯವರು, ತಮ್ಮ ಕೈಗೆ ಸಿಕ್ಕ ಯುದ್ಧ ಕೈದಿಗಳನ್ನು ನಾನಾ ವಿಧದ ಹಿಂಸೆ ನೀಡಿ ಬದುಕಲಾರದಂತೆ, ಸಾಯಲಾರದಂತೆ ಗೋಳುಗುಟ್ಟಿಸುತ್ತಿರುವ ನೆರೆದೇಶದವರು, ಆಗಷ್ಟೇ ಹುಟ್ಟಿ, ಕಣ್ಣು ಬಿಡುತ್ತಿರುವ ಹೆಣ್ಣು ಕೂಸಿನ ಬಾಯಲ್ಲಿ ಭತ್ತ ತುಂಬಿ ಕ್ರೂರವಾಗಿ ಕೊಲ್ಲುವವರು.

ವರದಕ್ಷಿಣೆ ತರಲಿಲ್ಲವೆಂದು ಹೆಣ್ಣಿಗೆ ವಿವಿಧ ಹಿಂಸೆ ನೀಡುತ್ತಾ ಹೀನ ಸಂತೋಷವನ್ನನುಭವಿಸುವವರು, ಕ್ಷುಲ್ಲಕ ಕಾರಣಕ್ಕೆ ರಕ್ತ ಬಸಿದು ಕೊಲೆ ಮಾಡುವವರು, ಕಾಲುಬಾಯಿ ರೋಗಕ್ಕೆ ತುತ್ತಾದ ಸಾವಿರಾರು ಹಸುಗಳ ಮಾಂಸ ಉಪಯೋಗಕ್ಕೆ ಬರುವುದಿಲ್ಲವೆಂದು ಅವುಗಳನ್ನೆಲ್ಲಾ ಒಟ್ಟಾಗಿ ಅಗ್ನಿಗಾಹುತಿ ನೀಡುತ್ತಿರುವ ವಿದೇಶಿಯರು, ದೇವರು ಒಲಿಯುವನೆಂಬ ಮೂಢನಂಬಿಕೆಗೆ ಬಲಿಯಾಗಿ ಕುರಿ, ಕೋಳಿ, ಕೋಣನ ಬಲಿ ನೀಡುತ್ತಿರುವ ಭಕ್ತರು, ತನ್ನ ಜಿಹ್ವಾಚಾಪಲ್ಯಕ್ಕಾಗಿ ಅನುದಿನವೂ ಸಾವಿರಾರು ಪ್ರಾಣಿ ಬಲಿ ನಡೆಸುತ್ತಿರುವವರು…. ಒಂದೇ, ಎರಡೇ ! ಮಾನವನ ಕ್ರೂರ ಮನದ ಈ ಚಿತ್ರಗಳು ನೂರು ಕರಾಳ ಕಥೆ ಹೇಳಬಲ್ಲವು.

ಮಾನವ ಜನ್ಮ ದೊಡ್ಡದು. ಅತ್ಯಂತ ಶ್ರೇಷ್ಠವಾದುದೆಂದು ಮಾನವನ ನಂಬುಗೆ. ಆದರೆ ಇಂತಹಾ ಘೋರಗಳನ್ನೆಸಗುತ್ತಿರುವುದೂ ಮಾನವ ಮಾತ್ರ! ಪ್ರಾಣಿಗಳು ತಮ್ಮ ಹಸಿವಿಂಗಿಸಿಕೊಳ್ಳಲಷ್ಟೇ ಬೇರೆ ಪ್ರಾಣಿಗಳನ್ನು ಬೇಟೆಯಾಡುತ್ತವೆ ಕೊಲ್ಲುತ್ತವೆ. ಆದರೆ ಈ ನರಮನುಷ್ಯ ನಾಗರೀಕತೆ ಬೆಳೆದಂತೆಲ್ಲ ಸಭ್ಯನಾಗದೇ ಸಭ್ಯತೆಯ ಮುಸುಕಿನೊಳಗೆ ಇಂಥಹಾ ಹೀನ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದಾನೆ. ಮಾನವನ ರಾಕ್ಷಸತ್ವದ ಈ ಮುಖಗಳನ್ನು ಕಂಡಾಗ ಎದೆ ನಡುಗುತ್ತದೆ. ಮನುಕುಲಕ್ಕೆ ಉತ್ತಮ ಭವಿಷ್ಯವಿದೆಯೇ ಎಂದು ಚಿಂತಿಸುತ್ತದೆ.

ತಲ್ಲಣಿಸುವ ಮನ ಗದ್ಗದಿಸುತ್ತಾ ‘ಓ ಮಾನವ ನೀನೆಷ್ಟು ಕ್ರೂರಿ ನಿನ್ನ ಅಹಂಕಾರಕ್ಕಾಗಿ, ಸ್ವಾರ್ಥ ಹಿತಕ್ಕಾಗಿ, ನಿನ್ನ ಪ್ರತಿಷ್ಠೆ ಮೇಲರಿಮೆಗಾಗಿ ಶ್ರೇಷ್ಠನೆಂಬ ಪೊಗರಿನಿಂದ ಅದೆಷ್ಟು ಘೋರಗಳನ್ನು ನಡೆಸುತ್ತಿರುವ ‘ನಿಜಕ್ಕೂ ನಿನಗೆ ಕ್ಷಮೆಯಿದೆಯೆ?’ ಎಂದು ಕೇಳುತ್ತದೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್ ಎನ್ ಎಸ್ ರಾವ್