Home / ಲೇಖನ / ಇತರೆ / ಮಾನವ ನೀನೆಷ್ಟು ಕ್ರೂರಿ ?

ಮಾನವ ನೀನೆಷ್ಟು ಕ್ರೂರಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಕೆಲವೊಂದು ಸನ್ನಿವೇಶಗಳನ್ನು, ದೃಶ್ಯಗಳನ್ನು ನಾವು ಕಣ್ಣಾರೆ ನೋಡದಿದ್ದರೂ ನಮ್ಮ ಮನಸ್ಸು ಅದನ್ನು ಕಲ್ಪಿಸಿಕೊಂಡು ಅತಿಸೂಕ್ಷ್ಮವಾಗಿ ಚಿತ್ರಿಸಿಕೊಂಡಿರುತ್ತದೆ. ಆ ಚಿತ್ರ ನಮ್ಮ ಮನಃಪಟಲವಲ್ಲಿ ಅಚ್ಚೊತ್ತಿ ಸದಾ ಕಾಡುತ್ತಿರುತ್ತವೆ. ಆ ಕೆಲಚಿತ್ರಗಳು….  ಭಾರತೀಯ ಯೋಧರ ಒಂದೊಂದು ಅಂಗಗಳನ್ನೂ ಬೇರ್ಪಡಿಸಿ ಚಿತ್ರಹಿಂಸೆ ನೀಡಿ ಕೊಲ್ಲುತ್ತಿರುವ ಬಾಂಗ್ಲಾದೇಶ ರೈಫಲ್ಸ್ ಪಡೆಯವರು, ತಮ್ಮ ಕೈಗೆ ಸಿಕ್ಕ ಯುದ್ಧ ಕೈದಿಗಳನ್ನು ನಾನಾ ವಿಧದ ಹಿಂಸೆ ನೀಡಿ ಬದುಕಲಾರದಂತೆ, ಸಾಯಲಾರದಂತೆ ಗೋಳುಗುಟ್ಟಿಸುತ್ತಿರುವ ನೆರೆದೇಶದವರು, ಆಗಷ್ಟೇ ಹುಟ್ಟಿ, ಕಣ್ಣು ಬಿಡುತ್ತಿರುವ ಹೆಣ್ಣು ಕೂಸಿನ ಬಾಯಲ್ಲಿ ಭತ್ತ ತುಂಬಿ ಕ್ರೂರವಾಗಿ ಕೊಲ್ಲುವವರು.

ವರದಕ್ಷಿಣೆ ತರಲಿಲ್ಲವೆಂದು ಹೆಣ್ಣಿಗೆ ವಿವಿಧ ಹಿಂಸೆ ನೀಡುತ್ತಾ ಹೀನ ಸಂತೋಷವನ್ನನುಭವಿಸುವವರು, ಕ್ಷುಲ್ಲಕ ಕಾರಣಕ್ಕೆ ರಕ್ತ ಬಸಿದು ಕೊಲೆ ಮಾಡುವವರು, ಕಾಲುಬಾಯಿ ರೋಗಕ್ಕೆ ತುತ್ತಾದ ಸಾವಿರಾರು ಹಸುಗಳ ಮಾಂಸ ಉಪಯೋಗಕ್ಕೆ ಬರುವುದಿಲ್ಲವೆಂದು ಅವುಗಳನ್ನೆಲ್ಲಾ ಒಟ್ಟಾಗಿ ಅಗ್ನಿಗಾಹುತಿ ನೀಡುತ್ತಿರುವ ವಿದೇಶಿಯರು, ದೇವರು ಒಲಿಯುವನೆಂಬ ಮೂಢನಂಬಿಕೆಗೆ ಬಲಿಯಾಗಿ ಕುರಿ, ಕೋಳಿ, ಕೋಣನ ಬಲಿ ನೀಡುತ್ತಿರುವ ಭಕ್ತರು, ತನ್ನ ಜಿಹ್ವಾಚಾಪಲ್ಯಕ್ಕಾಗಿ ಅನುದಿನವೂ ಸಾವಿರಾರು ಪ್ರಾಣಿ ಬಲಿ ನಡೆಸುತ್ತಿರುವವರು…. ಒಂದೇ, ಎರಡೇ ! ಮಾನವನ ಕ್ರೂರ ಮನದ ಈ ಚಿತ್ರಗಳು ನೂರು ಕರಾಳ ಕಥೆ ಹೇಳಬಲ್ಲವು.

ಮಾನವ ಜನ್ಮ ದೊಡ್ಡದು. ಅತ್ಯಂತ ಶ್ರೇಷ್ಠವಾದುದೆಂದು ಮಾನವನ ನಂಬುಗೆ. ಆದರೆ ಇಂತಹಾ ಘೋರಗಳನ್ನೆಸಗುತ್ತಿರುವುದೂ ಮಾನವ ಮಾತ್ರ! ಪ್ರಾಣಿಗಳು ತಮ್ಮ ಹಸಿವಿಂಗಿಸಿಕೊಳ್ಳಲಷ್ಟೇ ಬೇರೆ ಪ್ರಾಣಿಗಳನ್ನು ಬೇಟೆಯಾಡುತ್ತವೆ ಕೊಲ್ಲುತ್ತವೆ. ಆದರೆ ಈ ನರಮನುಷ್ಯ ನಾಗರೀಕತೆ ಬೆಳೆದಂತೆಲ್ಲ ಸಭ್ಯನಾಗದೇ ಸಭ್ಯತೆಯ ಮುಸುಕಿನೊಳಗೆ ಇಂಥಹಾ ಹೀನ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದಾನೆ. ಮಾನವನ ರಾಕ್ಷಸತ್ವದ ಈ ಮುಖಗಳನ್ನು ಕಂಡಾಗ ಎದೆ ನಡುಗುತ್ತದೆ. ಮನುಕುಲಕ್ಕೆ ಉತ್ತಮ ಭವಿಷ್ಯವಿದೆಯೇ ಎಂದು ಚಿಂತಿಸುತ್ತದೆ.

ತಲ್ಲಣಿಸುವ ಮನ ಗದ್ಗದಿಸುತ್ತಾ ‘ಓ ಮಾನವ ನೀನೆಷ್ಟು ಕ್ರೂರಿ ನಿನ್ನ ಅಹಂಕಾರಕ್ಕಾಗಿ, ಸ್ವಾರ್ಥ ಹಿತಕ್ಕಾಗಿ, ನಿನ್ನ ಪ್ರತಿಷ್ಠೆ ಮೇಲರಿಮೆಗಾಗಿ ಶ್ರೇಷ್ಠನೆಂಬ ಪೊಗರಿನಿಂದ ಅದೆಷ್ಟು ಘೋರಗಳನ್ನು ನಡೆಸುತ್ತಿರುವ ‘ನಿಜಕ್ಕೂ ನಿನಗೆ ಕ್ಷಮೆಯಿದೆಯೆ?’ ಎಂದು ಕೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...