Home / ಲೇಖನ / ಇತರೆ / ಮಾನವ ನೀನೆಷ್ಟು ಕ್ರೂರಿ ?

ಮಾನವ ನೀನೆಷ್ಟು ಕ್ರೂರಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಕೆಲವೊಂದು ಸನ್ನಿವೇಶಗಳನ್ನು, ದೃಶ್ಯಗಳನ್ನು ನಾವು ಕಣ್ಣಾರೆ ನೋಡದಿದ್ದರೂ ನಮ್ಮ ಮನಸ್ಸು ಅದನ್ನು ಕಲ್ಪಿಸಿಕೊಂಡು ಅತಿಸೂಕ್ಷ್ಮವಾಗಿ ಚಿತ್ರಿಸಿಕೊಂಡಿರುತ್ತದೆ. ಆ ಚಿತ್ರ ನಮ್ಮ ಮನಃಪಟಲವಲ್ಲಿ ಅಚ್ಚೊತ್ತಿ ಸದಾ ಕಾಡುತ್ತಿರುತ್ತವೆ. ಆ ಕೆಲಚಿತ್ರಗಳು….  ಭಾರತೀಯ ಯೋಧರ ಒಂದೊಂದು ಅಂಗಗಳನ್ನೂ ಬೇರ್ಪಡಿಸಿ ಚಿತ್ರಹಿಂಸೆ ನೀಡಿ ಕೊಲ್ಲುತ್ತಿರುವ ಬಾಂಗ್ಲಾದೇಶ ರೈಫಲ್ಸ್ ಪಡೆಯವರು, ತಮ್ಮ ಕೈಗೆ ಸಿಕ್ಕ ಯುದ್ಧ ಕೈದಿಗಳನ್ನು ನಾನಾ ವಿಧದ ಹಿಂಸೆ ನೀಡಿ ಬದುಕಲಾರದಂತೆ, ಸಾಯಲಾರದಂತೆ ಗೋಳುಗುಟ್ಟಿಸುತ್ತಿರುವ ನೆರೆದೇಶದವರು, ಆಗಷ್ಟೇ ಹುಟ್ಟಿ, ಕಣ್ಣು ಬಿಡುತ್ತಿರುವ ಹೆಣ್ಣು ಕೂಸಿನ ಬಾಯಲ್ಲಿ ಭತ್ತ ತುಂಬಿ ಕ್ರೂರವಾಗಿ ಕೊಲ್ಲುವವರು.

ವರದಕ್ಷಿಣೆ ತರಲಿಲ್ಲವೆಂದು ಹೆಣ್ಣಿಗೆ ವಿವಿಧ ಹಿಂಸೆ ನೀಡುತ್ತಾ ಹೀನ ಸಂತೋಷವನ್ನನುಭವಿಸುವವರು, ಕ್ಷುಲ್ಲಕ ಕಾರಣಕ್ಕೆ ರಕ್ತ ಬಸಿದು ಕೊಲೆ ಮಾಡುವವರು, ಕಾಲುಬಾಯಿ ರೋಗಕ್ಕೆ ತುತ್ತಾದ ಸಾವಿರಾರು ಹಸುಗಳ ಮಾಂಸ ಉಪಯೋಗಕ್ಕೆ ಬರುವುದಿಲ್ಲವೆಂದು ಅವುಗಳನ್ನೆಲ್ಲಾ ಒಟ್ಟಾಗಿ ಅಗ್ನಿಗಾಹುತಿ ನೀಡುತ್ತಿರುವ ವಿದೇಶಿಯರು, ದೇವರು ಒಲಿಯುವನೆಂಬ ಮೂಢನಂಬಿಕೆಗೆ ಬಲಿಯಾಗಿ ಕುರಿ, ಕೋಳಿ, ಕೋಣನ ಬಲಿ ನೀಡುತ್ತಿರುವ ಭಕ್ತರು, ತನ್ನ ಜಿಹ್ವಾಚಾಪಲ್ಯಕ್ಕಾಗಿ ಅನುದಿನವೂ ಸಾವಿರಾರು ಪ್ರಾಣಿ ಬಲಿ ನಡೆಸುತ್ತಿರುವವರು…. ಒಂದೇ, ಎರಡೇ ! ಮಾನವನ ಕ್ರೂರ ಮನದ ಈ ಚಿತ್ರಗಳು ನೂರು ಕರಾಳ ಕಥೆ ಹೇಳಬಲ್ಲವು.

ಮಾನವ ಜನ್ಮ ದೊಡ್ಡದು. ಅತ್ಯಂತ ಶ್ರೇಷ್ಠವಾದುದೆಂದು ಮಾನವನ ನಂಬುಗೆ. ಆದರೆ ಇಂತಹಾ ಘೋರಗಳನ್ನೆಸಗುತ್ತಿರುವುದೂ ಮಾನವ ಮಾತ್ರ! ಪ್ರಾಣಿಗಳು ತಮ್ಮ ಹಸಿವಿಂಗಿಸಿಕೊಳ್ಳಲಷ್ಟೇ ಬೇರೆ ಪ್ರಾಣಿಗಳನ್ನು ಬೇಟೆಯಾಡುತ್ತವೆ ಕೊಲ್ಲುತ್ತವೆ. ಆದರೆ ಈ ನರಮನುಷ್ಯ ನಾಗರೀಕತೆ ಬೆಳೆದಂತೆಲ್ಲ ಸಭ್ಯನಾಗದೇ ಸಭ್ಯತೆಯ ಮುಸುಕಿನೊಳಗೆ ಇಂಥಹಾ ಹೀನ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದಾನೆ. ಮಾನವನ ರಾಕ್ಷಸತ್ವದ ಈ ಮುಖಗಳನ್ನು ಕಂಡಾಗ ಎದೆ ನಡುಗುತ್ತದೆ. ಮನುಕುಲಕ್ಕೆ ಉತ್ತಮ ಭವಿಷ್ಯವಿದೆಯೇ ಎಂದು ಚಿಂತಿಸುತ್ತದೆ.

ತಲ್ಲಣಿಸುವ ಮನ ಗದ್ಗದಿಸುತ್ತಾ ‘ಓ ಮಾನವ ನೀನೆಷ್ಟು ಕ್ರೂರಿ ನಿನ್ನ ಅಹಂಕಾರಕ್ಕಾಗಿ, ಸ್ವಾರ್ಥ ಹಿತಕ್ಕಾಗಿ, ನಿನ್ನ ಪ್ರತಿಷ್ಠೆ ಮೇಲರಿಮೆಗಾಗಿ ಶ್ರೇಷ್ಠನೆಂಬ ಪೊಗರಿನಿಂದ ಅದೆಷ್ಟು ಘೋರಗಳನ್ನು ನಡೆಸುತ್ತಿರುವ ‘ನಿಜಕ್ಕೂ ನಿನಗೆ ಕ್ಷಮೆಯಿದೆಯೆ?’ ಎಂದು ಕೇಳುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...