Home / ಲೇಖನ / ಇತರೆ / ಮಾನವ ನೀನೆಷ್ಟು ಕ್ರೂರಿ ?

ಮಾನವ ನೀನೆಷ್ಟು ಕ್ರೂರಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಕೆಲವೊಂದು ಸನ್ನಿವೇಶಗಳನ್ನು, ದೃಶ್ಯಗಳನ್ನು ನಾವು ಕಣ್ಣಾರೆ ನೋಡದಿದ್ದರೂ ನಮ್ಮ ಮನಸ್ಸು ಅದನ್ನು ಕಲ್ಪಿಸಿಕೊಂಡು ಅತಿಸೂಕ್ಷ್ಮವಾಗಿ ಚಿತ್ರಿಸಿಕೊಂಡಿರುತ್ತದೆ. ಆ ಚಿತ್ರ ನಮ್ಮ ಮನಃಪಟಲವಲ್ಲಿ ಅಚ್ಚೊತ್ತಿ ಸದಾ ಕಾಡುತ್ತಿರುತ್ತವೆ. ಆ ಕೆಲಚಿತ್ರಗಳು….  ಭಾರತೀಯ ಯೋಧರ ಒಂದೊಂದು ಅಂಗಗಳನ್ನೂ ಬೇರ್ಪಡಿಸಿ ಚಿತ್ರಹಿಂಸೆ ನೀಡಿ ಕೊಲ್ಲುತ್ತಿರುವ ಬಾಂಗ್ಲಾದೇಶ ರೈಫಲ್ಸ್ ಪಡೆಯವರು, ತಮ್ಮ ಕೈಗೆ ಸಿಕ್ಕ ಯುದ್ಧ ಕೈದಿಗಳನ್ನು ನಾನಾ ವಿಧದ ಹಿಂಸೆ ನೀಡಿ ಬದುಕಲಾರದಂತೆ, ಸಾಯಲಾರದಂತೆ ಗೋಳುಗುಟ್ಟಿಸುತ್ತಿರುವ ನೆರೆದೇಶದವರು, ಆಗಷ್ಟೇ ಹುಟ್ಟಿ, ಕಣ್ಣು ಬಿಡುತ್ತಿರುವ ಹೆಣ್ಣು ಕೂಸಿನ ಬಾಯಲ್ಲಿ ಭತ್ತ ತುಂಬಿ ಕ್ರೂರವಾಗಿ ಕೊಲ್ಲುವವರು.

ವರದಕ್ಷಿಣೆ ತರಲಿಲ್ಲವೆಂದು ಹೆಣ್ಣಿಗೆ ವಿವಿಧ ಹಿಂಸೆ ನೀಡುತ್ತಾ ಹೀನ ಸಂತೋಷವನ್ನನುಭವಿಸುವವರು, ಕ್ಷುಲ್ಲಕ ಕಾರಣಕ್ಕೆ ರಕ್ತ ಬಸಿದು ಕೊಲೆ ಮಾಡುವವರು, ಕಾಲುಬಾಯಿ ರೋಗಕ್ಕೆ ತುತ್ತಾದ ಸಾವಿರಾರು ಹಸುಗಳ ಮಾಂಸ ಉಪಯೋಗಕ್ಕೆ ಬರುವುದಿಲ್ಲವೆಂದು ಅವುಗಳನ್ನೆಲ್ಲಾ ಒಟ್ಟಾಗಿ ಅಗ್ನಿಗಾಹುತಿ ನೀಡುತ್ತಿರುವ ವಿದೇಶಿಯರು, ದೇವರು ಒಲಿಯುವನೆಂಬ ಮೂಢನಂಬಿಕೆಗೆ ಬಲಿಯಾಗಿ ಕುರಿ, ಕೋಳಿ, ಕೋಣನ ಬಲಿ ನೀಡುತ್ತಿರುವ ಭಕ್ತರು, ತನ್ನ ಜಿಹ್ವಾಚಾಪಲ್ಯಕ್ಕಾಗಿ ಅನುದಿನವೂ ಸಾವಿರಾರು ಪ್ರಾಣಿ ಬಲಿ ನಡೆಸುತ್ತಿರುವವರು…. ಒಂದೇ, ಎರಡೇ ! ಮಾನವನ ಕ್ರೂರ ಮನದ ಈ ಚಿತ್ರಗಳು ನೂರು ಕರಾಳ ಕಥೆ ಹೇಳಬಲ್ಲವು.

ಮಾನವ ಜನ್ಮ ದೊಡ್ಡದು. ಅತ್ಯಂತ ಶ್ರೇಷ್ಠವಾದುದೆಂದು ಮಾನವನ ನಂಬುಗೆ. ಆದರೆ ಇಂತಹಾ ಘೋರಗಳನ್ನೆಸಗುತ್ತಿರುವುದೂ ಮಾನವ ಮಾತ್ರ! ಪ್ರಾಣಿಗಳು ತಮ್ಮ ಹಸಿವಿಂಗಿಸಿಕೊಳ್ಳಲಷ್ಟೇ ಬೇರೆ ಪ್ರಾಣಿಗಳನ್ನು ಬೇಟೆಯಾಡುತ್ತವೆ ಕೊಲ್ಲುತ್ತವೆ. ಆದರೆ ಈ ನರಮನುಷ್ಯ ನಾಗರೀಕತೆ ಬೆಳೆದಂತೆಲ್ಲ ಸಭ್ಯನಾಗದೇ ಸಭ್ಯತೆಯ ಮುಸುಕಿನೊಳಗೆ ಇಂಥಹಾ ಹೀನ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದಾನೆ. ಮಾನವನ ರಾಕ್ಷಸತ್ವದ ಈ ಮುಖಗಳನ್ನು ಕಂಡಾಗ ಎದೆ ನಡುಗುತ್ತದೆ. ಮನುಕುಲಕ್ಕೆ ಉತ್ತಮ ಭವಿಷ್ಯವಿದೆಯೇ ಎಂದು ಚಿಂತಿಸುತ್ತದೆ.

ತಲ್ಲಣಿಸುವ ಮನ ಗದ್ಗದಿಸುತ್ತಾ ‘ಓ ಮಾನವ ನೀನೆಷ್ಟು ಕ್ರೂರಿ ನಿನ್ನ ಅಹಂಕಾರಕ್ಕಾಗಿ, ಸ್ವಾರ್ಥ ಹಿತಕ್ಕಾಗಿ, ನಿನ್ನ ಪ್ರತಿಷ್ಠೆ ಮೇಲರಿಮೆಗಾಗಿ ಶ್ರೇಷ್ಠನೆಂಬ ಪೊಗರಿನಿಂದ ಅದೆಷ್ಟು ಘೋರಗಳನ್ನು ನಡೆಸುತ್ತಿರುವ ‘ನಿಜಕ್ಕೂ ನಿನಗೆ ಕ್ಷಮೆಯಿದೆಯೆ?’ ಎಂದು ಕೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...