ಸುಗ್ಗಿ ಮಾಡೋಣು ಬಾರವ್ವ ಗೆಳತಿ

ಸುಗ್ಗಿ ಮಾಡೋಣು ಬಾರವ್ವ ಗೆಳತಿ
ಸುಮ್ಮನಾಕ ಕುಳತಿ || ಪ ||

ಅಗ್ಗದ ಫಲಗಳ ಕೊಯ್ಯಲಿಕ್ಕೆ ಹೊಲದವ-
ರೊಗ್ಗಿಲೆ ಕರೆದರೆ ಹಿಗ್ಗಿಲಿ ಹೋಗಿ ||ಅ.ಪ.||

ಹೊಲದವ ಕರೆದರೆ ಹೋಗಲಿಬೇಕು
ನೆಲೆಯನು ತಿಳಿಯಬೇಕು
ಕುಲದವರೊಂದು ಸಲಗಿಯ ಸಾಕು
ಬಲು ಜೋಕಿರಬೇಕು
ಹೊಲದೊಳು ಬೆಳದಿಹ ಹುಳ್ಳಿ ಮಿಕ್ಕಿ ಕಸ
ತಳದ ಕೋಲಿಯ ದಾಟಿ ಕೊಯ್ಯೋಣಮ್ಮಾ ||೧||

ಏಳೆಂಟು ಅಕ್ಕಡಿಯ ಎಣಿಸಿ
ಬಾಳದರೋಳು ದಣಿಸಿ
ಕಾಳಕೂಟದ ವಿಷವೆಣಿಸಿ ಎಲ್ಲವೆಲ್ಲವ ಗಣಸಿ
ಬಾಳೊಂದು ರಾಗಿ ನವಣಿ ಸಾವಿ ಸಜ್ಜಿಯ
ಓಲ್ಯಾಡುತ ಬಹು ರಾಗದಿ ಕೊಯ್ಯುತ್ತಾ ||೨||

ಶಿಶುನಾಳಧೀಶ ತಾನೀಗ ಅವ ಕರಿಯುವದ್ಹ್ಯಾಂಗ
ವಸುಧಿಯೊಳ್ ಬೆಳಸಿದ ಬೇಗಾ
ಕರಿದರೆ ಗಡ ಹೋಗ
ಕಸವ ಕಳಿದು ಕೈ ಕುಡಗೋಲ ಹಿಡಿಯುತ
ಹಸನಾಗಿ ಹಲವರು ಹರಿವ ಮನವ ಸುಟ್ಟು ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೋಹದ ಹೆಂಡತಿ ಸತ್ತ ಬಳಿಕ
Next post ನನ್ನ ಹೇಣ್ತೆ ನನ್ನ ಹೇಣ್ತೆ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

cheap jordans|wholesale air max|wholesale jordans|wholesale jewelry|wholesale jerseys