Home / ಕವನ / ಕವಿತೆ / ಜಾಣ ಹೆಂಗಸರಾಟ ನೋಡು ಜಲದ ಬಾವ್ಯಾಗ

ಜಾಣ ಹೆಂಗಸರಾಟ ನೋಡು ಜಲದ ಬಾವ್ಯಾಗ

ಜಾಣ ಹೆಂಗಸರಾಟ ನೋಡು ಜಲದ ಬಾವ್ಯಾಗ
ಜಲದಿಂದ ಕೊಡಗಳ ತುಂಬುತಿದ್ದರು ನಲಿದು ನೀರಾಗ ||ಪ||

ಸಲಗಿಯಿಂದ ಗೆಳತೆರೆಲ್ಲರು ಕುಲಕೆ ಒಬ್ಬರು ಕೂಡಿಕೊಂಡು
ಹಲವು ಮಾತಗಳಾಡುತಾಡುತ ಚಿಕ್ಕಿ ಸೀರಿ ಚಿಮ್ಮು ಚಿಮ್ಮುತ ||ಅ.ಪ.||

ಅಡಗಿಮಾಡುವ ಲಕ್ಷ್ಯ ಆಗಿತ್ತು
ಅದರೊಳಗೆ ಇವರು ನೀರಿಗಂದರೆ ನಿಲ್ಲದೆ ಹೋಗುವರು
ಕಲ್ಲಭಾವಿ ಮೆಲ್ಲನೇರಿ ಬಂದು ಹತ್ತಿ ನಿಂತು
ನಾಲ್ವರಿದ್ದ ಠಾವಿನಲ್ಲಿ ನಲಿದು ನಲಿದು ನುಡಿಯುತಿದ್ದರು ||೧||

ವಿಟಕರಿದ್ದಲಿ ಚಟದಿ ನೋಡುವಳು ಸಲಿಹಲ್ಲು ಇವಳು
ಹುಬ್ಬು ಕಾಮನಬಿಲ್ಲು ತುಟಿಯವಳು
ರಬ್ಬಿಲೊಂದು ಸೀರೆನುಟ್ಟು ಹುಬ್ಬು ಹಾರಿಸಿ ಮಬ್ಬುಗವಿಸಿ
ಅರಿಯದವರಿಗೆ ಅಳತೆ ಕಲಿಸುವ ಹಿರಿಯ ಹಾದರ ಮರಿಯ ಹೌದಿದು ||೨||

ಕುಟಿಲಕುಂತಳೆ ನಿಟಿಲನೇತ್ರದಲಿ
ಇವಳಾಟ ನೋಡಿ ದಾಟಲಾರರು ವಿಪಿನದೊಳಗಿನ ತಪದ ಋಷಿಗಳು
ಮುಖವ ನೋಡಿ ತಪವ ಬಿಟ್ಟು ಕಪವ ಇಲ್ಲದೆ ಕ್ಯಾರಿ ಉಗುಳಿ
ನೊಸಲೊಳುಪ್ಪುವ ಕುಚವ ನೋಡಿ ಕಾಸಿ ಕೈಪವ ಸಡಲತಿದ್ದವು ||೩||

ಜಾಣ ಹೆಂಗಸರಾಟ ನೋಡು ಜಲದ ಬಾವ್ಯಾಗ
ಜಲದಿಂದ ಕೊಡಗಳ ತುಂಬುತಿದ್ದರು ನಲಿದು
ಜಾರಿಬಿದ್ದು ಊರಿ ಎದ್ದು ಧೀರ ಶರೀಫರು ಸಾರುಸಾರುತ
ಊರ ಅಗಡಿಯ ಗ್ರಾಮದೊಳು ಚಾರುಚರಿತ್ತವ ಸಾರುಸಾರುತ ||೪||
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...