Home / ಕವನ / ಕವಿತೆ / ಬಿಂದು

ಬಿಂದು

ಒಂದು ಚಣದ ಆವೇಶದಲ್ಲಿ ಮೇಲಿಂದ ಇಳಿದು ಬಂದು
ತುಂಬಿಯೊಡಲು ಜೇನಾಗಿ ಹೂವಿನಲಿ ಮಧುರ ಮಧುವ ತಂದು

ಬಿಂದು ಬಿಂದು ಸಿಹಿ ನೀರ ಧಾರೆ ಅದಕಾಯ್ತು ದಿನದ ಅನ್ನ
ಕುಂದು ಕೊರತೆಗಳ ನಗೆಯ ಅಲೆಗಳಲಿ ತೇಲಿಸಿತು ತನ್ನ

ಎಲೆಯ ಗಾಳಿಯುಲಿಯಾಗಿ ತೇಲಿ ನಲಿದಾಡಿ ಹೂವ ಹನಿಯು
ತಲೆಯ ತುಂಬ ಸವಿಗನಸ ತುಂಬಿ ತುಂಬಿಗಳ ರಸದ ಗನಿಯು

ಅದರ ಇದರ ಬಾಯಿಯಲಿ ಜೊಲ್ಲು ಹನಿ ಬೀಳೆ ಅಮೃತವೆಂದು
ಉದರ ಭರಿಸಿ ನಾಲಗೆಯ ಚಲಿಸಿ ಕಹಿಗೊಲಿದು ಸಿಹಿಯದೆಂದು

ನೀಲಿ ಮೈಯನಲೆದಾಡಿ ದುಡಿಯುತಿಹ ಬಿಂದು ಬಿಂದು ಕರೆಗೆ
ಸಾಲು ಪುಳಕ ಮೈಗಾಗೆ ತಿರೆಯ ಹನಿ ಒಳಗೆ ಒಳಗೆ ಕೊರಗೆ

ಬಿಂದು ಕರಗಿ ಹೊರನೋಟದಲ್ಲಿ ಬರಿಗುಳ್ಳೆಯಾಗಿ ಹೊಳೆದು
ಅಂದವೆಂದು ಬಂಧಿಸಲು ಅದನು ಏನೇನೊ ಕವಚ ತಳೆದು

ಬಿಂದುವೊಂದು ಇದು ಅಂದಗುಂದಿ ಕಳೆಗುಂದುತಿಹುದು ಇಲ್ಲಿ
ಚೆಂದ ಚೆಲುವುಗಳು ಕಂದಿ ಕರಗಿರಲು ಕರೆಯು ಮಾತ್ರದಲ್ಲಿ

ಒಂದು ಬಿಂದು ನೂರೊಂದು ವೇಷಗಳ ಅಂಗ ಅಂಗಿಯಾಯ್ತ
ಚೆಂದ ಚೆಂದವೆಂದಂದಗೆಟ್ಟರೂ ಅದುವೆ ದೊಂದಿಯಾಯ್ತು

ಹನಿಯ ಮೋಹ ಹನಿಗೂಡಿ ಹಳ್ಳದಲಿ ಬಿರಿದು ಮುಚ್ಚಿ ಹೋಯ್ತು
ತನಗೆ ತಾನೆ ಕಂದಕದಿ ಧುಮುಕಿ ಆ ರೂಪ ಕೊಚ್ಚಿ ಹೋಯ್ತು

ನುಚ್ಚು ನೂರು ಛಿದ್ರಗಳ ತಾಳಿ ಬಂಡೆಗಳ ಮೇಲೆ ಢಿಕ್ಕಿ
ಹುಚ್ಚು ಹಿಡಿದು ಎಳೆ‌ಎಳೆಯ ನಾಡಿ ಕೂದಲಲೆ ಹರಣಸಿಕ್ಕಿ

ಉಬ್ಬಿ ಒಡೆದು ಮತ್ತುಬ್ಬಿಯುಬ್ಬಿ ಉದರಕ್ಕೆ ಬರಿಯ ಬೇನೆ
ಹಬ್ಬಿ ಬೆಳೆವ ಹಂದರದ ಮೇಲೆ ಬೀಳುತಿರೆ ಬೆಂಕಿ ಸೋನೆ

ಬಿದ್ದ ಅಗುಳ ನನ ನನಗೆ ಎಂದು ಮುಗಿಬಿದ್ದವೆಷ್ಟೊ ಮೀನು
ಹದ್ದು ಕಚ್ಚಿ ಕಣ ಕಣವನೆಲ್ಲ ಬರುಸೂರೆ ಗೈಯೆ ತಾನು

ಎಲ್ಲ ಮೀನುಗಳು ಕಿತ್ತು ತಿಂದರೂ ನೀರಿನೊಡನೆ ಬೆರೆತು
ಇಲ್ಲವಾದರೂ ಇರುವ ಛಲದ ಸೂತ್ರವನೆ ಅರಿತು ಕುರಿತು

ಚಿಮ್ಮಿ ಚೀರುತಿಹ ಛಿದ್ರ ತುಂತರಲೆ ಅಯಸ್ಕಾಂತ ಸೆಳೆತ
ಹೊಮ್ಮಿ ತೋರಿತಿದೆ ಕಂಡು ಕಾಣದೆಯೆ ರೂಹುಗೊಡುವ ಹರಿತ

ಬಿಂದು ಅಳಿಯಿತೋ ಬಿಂದು ಬೆಳೆಯಿತೋ ಅಂತು ರೂಪ ಹೋಯ್ತು
ತಿಂದು ಕಳೆಯಿತೋ ಕೊಂದು ನರಳಿತೋ ಬಿಕ್ಕು ಬೀಗಿ ಹೋಯ್ತು

ಕಣ್ಣಿನಂಚಿನಲಿ ಉರುಳಿ ಬೀಳ್ವ ಕರುಳುಗಳ ಬಿಂದು ಮಾಲೆ
ಹಣ್ಣಿನಲ್ಲಿ ಹರಿದು ಕಾಣದೆಯೆ ಉಳಿದ ಬೀಜಕ್ಕೆ ಭವ್ಯ ಲೀಲೆ
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...