Home / ಕವನ / ಕವಿತೆ / ಪ್ರೇಮ ದೂತ

ಪ್ರೇಮ ದೂತ

ಯಕ್ಷಿಯನ್ನು ತೊರೆದಂದು ಯಕ್ಷ ಕಳಿಸಿದ್ದ ಮೇಘ ದೂತ
ಪತ್ರ ಒಯ್ಯಲಿಕೆ ದಾರಿಯಿಲ್ಲದಿತ್ತಾಗ ಭಾವ ದೂತ

ಅಕ್ಷರಕ್ಷದ ಯಕ್ಷ ಲೋಕವನು ಪತ್ರ ತೋರದೇನು
ರಕ್ತ ರಕ್ತ ಉಸಿರಿಸುವ ರಾಗ ಅನುರಕ್ತಿ ಹರಿಸದೇನು

ದೇಹ ದೂರದಲಿ ಇದ್ದರೇನು ಈ ದಾಹಕೆಲ್ಲಿ ದೇಹ
ಮನೋಲೋಕದಲಿ ಬರೀ ಭಾವ ಬೆಳದಿಂಗಳ ಪ್ರಭಾವ

ಭಾವ ಲೋಕದಲಿ ವಿಹರಿಸುವುದು ಕೆಲ ಭಾವುಕರಿಗೆ ಸಾಧ್ಯ
ದೇಹತೃಷೆಯ ಮೀರಿರುವ ಬಂಧನವು ಸವೆಯದಂಥ ಖಾದ್ಯ

ನಿನ್ನ ಹೃದಯ ದೇಗುಲವ ಸಿಂಗರಿಪ ಭಾಗ್ಯವಂತ ನಾನು
ನನ್ನ ಮನವ ಸಿಂಗರಿಪ ಮಾನಿನಿಯೆ ಚಿಂತೆ ಬೇಡವೇನು

ದೂರ ದೂರದಲಿ ಕಾಂಬ ಗುಡ್ಡವದು ಮಾಲೆಮಾಲೆ ನೀಲಿ
ಮುಳ್ಳುಕಲ್ಲುಗಳು ಅಲ್ಲಿ ಬಹಳ ಇವೆ ನಡೆಯಬೇಕು ತೇಲಿ

ಚೆಲುವೊ ಒಲವೊ ಬಾಳೆಲ್ಲ ಭವ್ಯತೆಗೆ ಏರೆ ಮಾತ್ರ ಯೋಗ್ಯ
ಬಣ್ಣ ಬದುಕು ಬರಡಾದ ಮೇಲು ಉಳಿಯುವುದು ಪ್ರೇಮ ಭಾಗ್ಯ

ಕೂಡುವಂಥ ಸುಖಕಿಂತ ಕೂಟ ಹಾರೈಕೆ ಸೊಗಸು ಏನೊ
ತಿನ್ನುವಂಥ ಸವಿಗಿಂತ ತಿನ್ನಲಿಹ ಬಯಕೆ ರುಚಿಯೊ ಏನೊ

ತನುವು ಹುಟ್ಟಿ ಬೆಳೆದಾಡಿ ಅಳಿಯುವುದು ನಿತ್ಯಜೀವ ಯಾತ್ರೆ
ಮನದ ಭಾವ ಶ್ರೀಮಂತ ಲೀಲೆಯದು ಸತ್ಯ ಚೈತ್ಯ ಯಾತ್ರೆ

ನಮ್ಮ ಜನ್ಮಗಳ ಗಂಟು ಎನ್ನುವರು ಗಂಡು ಹೆಣ್ಣು ಜೋಡಿ
ಜೋಡಿ ಜೋಡಿಗಳು ಒಂದೆ ಎಂದರೇಕಿಷ್ಟು ಹೆಚ್ಚು ರಾಡಿ

ಹಿಂದು ಮುಂದು ಜನುಮಗಳ ಕಂಡವರು ಯಾರೊ ಎಲ್ಲೋ ಏನೊ
ಇಂದು ನಾಳೆಗಳು ನಮ್ಮ ಕೈಯಲಿವೆ ಕೂಡಿ ಬಾಳೆ ಜೇನೊ

ಏನೂ ಅಳಿಯುವುದು ಏನೊ ಉಳಿಯುವುದು ಉಳಿವುದೊಂದೆ ಗುರಿಯು
ಇಹವು ಕಳೆದರೂ ಪರವು ಉಳಿಯುವುದು ಜೀವಿಗದುವೆ ಗುರಿಯು

ಅಂದು ಕೊಳ್ಳುವುದು ಆಡಿಕೊಳ್ಳುವುದು ಮಾತು ಬರಹವೊಂದು
ಮಾಡಿಕೊಳ್ಳುವುದು ಕಂಡು ಕೊಳ್ಳುವುದು ನಡತೆ ಬೇರೆಯೊಂದು

ಉದ್ದ ಉದ್ದ ಮೈಲುದ್ದ ಬರೆದರೇನೊಂದು ಮಾಡದಲ್ಲೆ
ಮೆರಗು ಬೆರಗು ಬುರುಗೆಲ್ಲ ಹೋಗಿರಲು ಪ್ರೇಮ ನೋಡೆ ನಲ್ಲೆ

ಏನು ಬಯಸದೆಯೆ ಬಂದುದನ್ನು ವರವೆಂದು ತಿಳಿಯೆ ಸುಖವು
ಗುಡ್ಡದಾಸೆ ಬರಿಕಡ್ಡಿಯಾಗಿ ಹೋದೀತು ಗುಳ್ಳೆ ಮುಖವು

ನನಗೆ ನೀನು ನಾ ನಿನಗೆ ಎನ್ನುವುದು ಕೆಲವು ದಿನದ ಸೆಳೆತ
ನೀನು ನಾನು ಬೇರೊಬ್ಬಗಾಗಿ ಎನ್ನುವುದು ಕೊನೆಯ ಎಳೆತ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...