ಪ್ರೇಮ ದೂತ

ಯಕ್ಷಿಯನ್ನು ತೊರೆದಂದು ಯಕ್ಷ ಕಳಿಸಿದ್ದ ಮೇಘ ದೂತ
ಪತ್ರ ಒಯ್ಯಲಿಕೆ ದಾರಿಯಿಲ್ಲದಿತ್ತಾಗ ಭಾವ ದೂತ

ಅಕ್ಷರಕ್ಷದ ಯಕ್ಷ ಲೋಕವನು ಪತ್ರ ತೋರದೇನು
ರಕ್ತ ರಕ್ತ ಉಸಿರಿಸುವ ರಾಗ ಅನುರಕ್ತಿ ಹರಿಸದೇನು

ದೇಹ ದೂರದಲಿ ಇದ್ದರೇನು ಈ ದಾಹಕೆಲ್ಲಿ ದೇಹ
ಮನೋಲೋಕದಲಿ ಬರೀ ಭಾವ ಬೆಳದಿಂಗಳ ಪ್ರಭಾವ

ಭಾವ ಲೋಕದಲಿ ವಿಹರಿಸುವುದು ಕೆಲ ಭಾವುಕರಿಗೆ ಸಾಧ್ಯ
ದೇಹತೃಷೆಯ ಮೀರಿರುವ ಬಂಧನವು ಸವೆಯದಂಥ ಖಾದ್ಯ

ನಿನ್ನ ಹೃದಯ ದೇಗುಲವ ಸಿಂಗರಿಪ ಭಾಗ್ಯವಂತ ನಾನು
ನನ್ನ ಮನವ ಸಿಂಗರಿಪ ಮಾನಿನಿಯೆ ಚಿಂತೆ ಬೇಡವೇನು

ದೂರ ದೂರದಲಿ ಕಾಂಬ ಗುಡ್ಡವದು ಮಾಲೆಮಾಲೆ ನೀಲಿ
ಮುಳ್ಳುಕಲ್ಲುಗಳು ಅಲ್ಲಿ ಬಹಳ ಇವೆ ನಡೆಯಬೇಕು ತೇಲಿ

ಚೆಲುವೊ ಒಲವೊ ಬಾಳೆಲ್ಲ ಭವ್ಯತೆಗೆ ಏರೆ ಮಾತ್ರ ಯೋಗ್ಯ
ಬಣ್ಣ ಬದುಕು ಬರಡಾದ ಮೇಲು ಉಳಿಯುವುದು ಪ್ರೇಮ ಭಾಗ್ಯ

ಕೂಡುವಂಥ ಸುಖಕಿಂತ ಕೂಟ ಹಾರೈಕೆ ಸೊಗಸು ಏನೊ
ತಿನ್ನುವಂಥ ಸವಿಗಿಂತ ತಿನ್ನಲಿಹ ಬಯಕೆ ರುಚಿಯೊ ಏನೊ

ತನುವು ಹುಟ್ಟಿ ಬೆಳೆದಾಡಿ ಅಳಿಯುವುದು ನಿತ್ಯಜೀವ ಯಾತ್ರೆ
ಮನದ ಭಾವ ಶ್ರೀಮಂತ ಲೀಲೆಯದು ಸತ್ಯ ಚೈತ್ಯ ಯಾತ್ರೆ

ನಮ್ಮ ಜನ್ಮಗಳ ಗಂಟು ಎನ್ನುವರು ಗಂಡು ಹೆಣ್ಣು ಜೋಡಿ
ಜೋಡಿ ಜೋಡಿಗಳು ಒಂದೆ ಎಂದರೇಕಿಷ್ಟು ಹೆಚ್ಚು ರಾಡಿ

ಹಿಂದು ಮುಂದು ಜನುಮಗಳ ಕಂಡವರು ಯಾರೊ ಎಲ್ಲೋ ಏನೊ
ಇಂದು ನಾಳೆಗಳು ನಮ್ಮ ಕೈಯಲಿವೆ ಕೂಡಿ ಬಾಳೆ ಜೇನೊ

ಏನೂ ಅಳಿಯುವುದು ಏನೊ ಉಳಿಯುವುದು ಉಳಿವುದೊಂದೆ ಗುರಿಯು
ಇಹವು ಕಳೆದರೂ ಪರವು ಉಳಿಯುವುದು ಜೀವಿಗದುವೆ ಗುರಿಯು

ಅಂದು ಕೊಳ್ಳುವುದು ಆಡಿಕೊಳ್ಳುವುದು ಮಾತು ಬರಹವೊಂದು
ಮಾಡಿಕೊಳ್ಳುವುದು ಕಂಡು ಕೊಳ್ಳುವುದು ನಡತೆ ಬೇರೆಯೊಂದು

ಉದ್ದ ಉದ್ದ ಮೈಲುದ್ದ ಬರೆದರೇನೊಂದು ಮಾಡದಲ್ಲೆ
ಮೆರಗು ಬೆರಗು ಬುರುಗೆಲ್ಲ ಹೋಗಿರಲು ಪ್ರೇಮ ನೋಡೆ ನಲ್ಲೆ

ಏನು ಬಯಸದೆಯೆ ಬಂದುದನ್ನು ವರವೆಂದು ತಿಳಿಯೆ ಸುಖವು
ಗುಡ್ಡದಾಸೆ ಬರಿಕಡ್ಡಿಯಾಗಿ ಹೋದೀತು ಗುಳ್ಳೆ ಮುಖವು

ನನಗೆ ನೀನು ನಾ ನಿನಗೆ ಎನ್ನುವುದು ಕೆಲವು ದಿನದ ಸೆಳೆತ
ನೀನು ನಾನು ಬೇರೊಬ್ಬಗಾಗಿ ಎನ್ನುವುದು ಕೊನೆಯ ಎಳೆತ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೆಸರಿಸಲಾರದ ಸಂಬಂಧಗಳು !
Next post ಲಿಂಗಮ್ಮನ ವಚನಗಳು – ೫೪

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys