Home / ಕವನ / ಕವಿತೆ / ನೆಮ್ಮದಿಯೆಲ್ಲೆಡೆಗೆ

ನೆಮ್ಮದಿಯೆಲ್ಲೆಡೆಗೆ

ನೆಮ್ಮದಿಯು ಸರ್ವರಿಗೆ ನೆಮ್ಮದಿಯು ಎಲ್ಲೆಡೆಗೆ
ನೆಮ್ಮದಿಯು ಭೂತಳದ ದೇಶಗಳಿಗೆಲ್ಲ

ಆನಂದವೆಲ್ಲರಿಗೆ ಆನಂದವೆಲ್ಲೆಡೆಗೆ
ಆನಂದವಿರಲೆಲ್ಲ ರಾಷ್ಟ್ರಗಳಲೆಲ್ಲ
ನೆಮ್ಮದಿಯು ಚೆಂಗುಲಾಬಿಯ ಬೆಳಗಿನಂತೆ
ಆನಂದ ನಸುನಗುವ ವಸಂತನಂತೆ

ಒಬ್ಬನಿಗೆ ಎಲ್ಲರೂ ಪ್ರತಿಯೊಬ್ಬನೆಲ್ಲರಿಗೆ
ಇದುವೆ ಬಾಳುವೆಯಲ್ಲೆ ಬಂಗಾರ ನಿಯಮ
ಜೀವನವು ಬೆಳಕು ಮೇಣ್ ಪ್ರೀತಿಗಳು ಎಲ್ಲರಿಗೆ
ಜೀವಿಗಳಿಗೆಲ್ಲರಿಗೆ ಪ್ರೇಮ ನಿಸ್ಸೀಮ

ಎಲ್ಲರಿಗೆ ಕಾಯಕವು ಅನ್ನ ಬಟ್ಟೆಗಳಿರಲಿ
ಸರಿಸಮತೆ ನೆಲಗೊಳ್ಳಲೆಲ್ಲರಲ್ಲಿ
ಮನೆ ಶಾಲೆ ಆರೋಗ್ಯವನುಕೂಲವೆಲ್ಲರಿಗೆ
ಸಂತಸದ ಜಗವಿರಲಿ ಎಲ್ಲೆಡೆಯಲಿ

ಸೋಮಾರಿ ಸಿರಿತನವು ಬರಿಹೊಟ್ಟೆ ಭಿಕ್ಷುಕರು
ಬೇಡವೈ ಎಲ್ಲರೂ ಸಮ ಕೆಲಸದಲ್ಲಿ
ಕಣ್ಣೀರ ಕರೆಬೇಡ ಅಂಜಿಕೆಯ ಪರಿಬೇಡ
ನಗುವುಕ್ಕಿ ಹರಿಯಲೀ ಎಲ್ಲರೆದೆಯಲ್ಲಿ

ಅಣುಶಕ್ತಿ ಭಯಬೇಡ ಸಿರಿರಾಷ್ಟ್ರ ಬಲಬೇಡ
ಯುದ್ಧ ರಾಕ್ಷಸನಿಗೋ ಸ್ಥಳವೆ ಬೇಡ
ಮರದ ಎಲೆಗಳ ರೀತಿ ಸೂರ್ಯಕಿರಣಗಳಂತೆ
ನಾವೆಲ್ಲ ದಿವ್ಯ ಮಾನವರು ನೋಡ

ನಿನ್ನೊಳಗಿನೊಳತಿರುಳು ಎಲ್ಲರೊಳಿತಿಗೆ ತುಡಿದು
ನಿನ್ನ ಜೀವವು ಎಲ್ಲ ಜೀವಗಳಿಗಾಗಿ
ನಿನ್ನ ದೇವರು ಎಲ್ಲ ಜನರಲ್ಲು ತುಂಬಿಹನು
ನಿನ್ನ ಪ್ರೀತಿಯು ಎಲ್ಲ ಮಾನವರಿಗಾಗಿ

ಅವನಿಗೋ ಅವಳಿಗೋ ಪ್ರತಿಯೊಬ್ಬ ವ್ಯಕ್ತಿಗೋ
ಸಹಬಾಳ್ವೆಯೇ ಬೆಳಕು ಅತ್ಯುತ್ತಮಾ
ಪಾಶ್ಚಾತ್ಯ ಪೌರಾತ್ಯ ಭೂಬಂಧುಗಳಿಗೆಲ್ಲ
ವಿಶ್ವ ಮಾನವ ಧರ್ಮ ಅತ್ಯುತ್ತಮ

ಸಸ್ಯ ಸಂತತಿಗೆಲ್ಲ ಪ್ರಾಣಿ ಪಕ್ಷಿಗಳಿಗೂ
ಗಿರಿಗಳಿಗೆ ವನಗಳಿಗೆ ಕಳಕಳದ ಹೊಳೆಗೆ
ನೆಲ ಜಲಕೆ ತಿರೆ ವಾಯು ಪಂಚಭೂತದ ಜಗಕೆ
ಚೈತನ್ಯ ನೆಮ್ಮದಿಯು ತುಂಬಿ ಬೆಳಗೆ

ಎಲ್ಲರಿಗೂ ನೆಮ್ಮದಿಯು ಎಲ್ಲೆಡೆಗು ನೆಮ್ಮದಿಯು
ಅಮರ ಶಾಂತಿಯ ದಿವ್ಯ ಭವ್ಯ ನೆಮ್ಮದಿಯು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...