Home / ಕವನ / ಕವಿತೆ / ನೆಮ್ಮದಿಯೆಲ್ಲೆಡೆಗೆ

ನೆಮ್ಮದಿಯೆಲ್ಲೆಡೆಗೆ

ನೆಮ್ಮದಿಯು ಸರ್ವರಿಗೆ ನೆಮ್ಮದಿಯು ಎಲ್ಲೆಡೆಗೆ
ನೆಮ್ಮದಿಯು ಭೂತಳದ ದೇಶಗಳಿಗೆಲ್ಲ

ಆನಂದವೆಲ್ಲರಿಗೆ ಆನಂದವೆಲ್ಲೆಡೆಗೆ
ಆನಂದವಿರಲೆಲ್ಲ ರಾಷ್ಟ್ರಗಳಲೆಲ್ಲ
ನೆಮ್ಮದಿಯು ಚೆಂಗುಲಾಬಿಯ ಬೆಳಗಿನಂತೆ
ಆನಂದ ನಸುನಗುವ ವಸಂತನಂತೆ

ಒಬ್ಬನಿಗೆ ಎಲ್ಲರೂ ಪ್ರತಿಯೊಬ್ಬನೆಲ್ಲರಿಗೆ
ಇದುವೆ ಬಾಳುವೆಯಲ್ಲೆ ಬಂಗಾರ ನಿಯಮ
ಜೀವನವು ಬೆಳಕು ಮೇಣ್ ಪ್ರೀತಿಗಳು ಎಲ್ಲರಿಗೆ
ಜೀವಿಗಳಿಗೆಲ್ಲರಿಗೆ ಪ್ರೇಮ ನಿಸ್ಸೀಮ

ಎಲ್ಲರಿಗೆ ಕಾಯಕವು ಅನ್ನ ಬಟ್ಟೆಗಳಿರಲಿ
ಸರಿಸಮತೆ ನೆಲಗೊಳ್ಳಲೆಲ್ಲರಲ್ಲಿ
ಮನೆ ಶಾಲೆ ಆರೋಗ್ಯವನುಕೂಲವೆಲ್ಲರಿಗೆ
ಸಂತಸದ ಜಗವಿರಲಿ ಎಲ್ಲೆಡೆಯಲಿ

ಸೋಮಾರಿ ಸಿರಿತನವು ಬರಿಹೊಟ್ಟೆ ಭಿಕ್ಷುಕರು
ಬೇಡವೈ ಎಲ್ಲರೂ ಸಮ ಕೆಲಸದಲ್ಲಿ
ಕಣ್ಣೀರ ಕರೆಬೇಡ ಅಂಜಿಕೆಯ ಪರಿಬೇಡ
ನಗುವುಕ್ಕಿ ಹರಿಯಲೀ ಎಲ್ಲರೆದೆಯಲ್ಲಿ

ಅಣುಶಕ್ತಿ ಭಯಬೇಡ ಸಿರಿರಾಷ್ಟ್ರ ಬಲಬೇಡ
ಯುದ್ಧ ರಾಕ್ಷಸನಿಗೋ ಸ್ಥಳವೆ ಬೇಡ
ಮರದ ಎಲೆಗಳ ರೀತಿ ಸೂರ್ಯಕಿರಣಗಳಂತೆ
ನಾವೆಲ್ಲ ದಿವ್ಯ ಮಾನವರು ನೋಡ

ನಿನ್ನೊಳಗಿನೊಳತಿರುಳು ಎಲ್ಲರೊಳಿತಿಗೆ ತುಡಿದು
ನಿನ್ನ ಜೀವವು ಎಲ್ಲ ಜೀವಗಳಿಗಾಗಿ
ನಿನ್ನ ದೇವರು ಎಲ್ಲ ಜನರಲ್ಲು ತುಂಬಿಹನು
ನಿನ್ನ ಪ್ರೀತಿಯು ಎಲ್ಲ ಮಾನವರಿಗಾಗಿ

ಅವನಿಗೋ ಅವಳಿಗೋ ಪ್ರತಿಯೊಬ್ಬ ವ್ಯಕ್ತಿಗೋ
ಸಹಬಾಳ್ವೆಯೇ ಬೆಳಕು ಅತ್ಯುತ್ತಮಾ
ಪಾಶ್ಚಾತ್ಯ ಪೌರಾತ್ಯ ಭೂಬಂಧುಗಳಿಗೆಲ್ಲ
ವಿಶ್ವ ಮಾನವ ಧರ್ಮ ಅತ್ಯುತ್ತಮ

ಸಸ್ಯ ಸಂತತಿಗೆಲ್ಲ ಪ್ರಾಣಿ ಪಕ್ಷಿಗಳಿಗೂ
ಗಿರಿಗಳಿಗೆ ವನಗಳಿಗೆ ಕಳಕಳದ ಹೊಳೆಗೆ
ನೆಲ ಜಲಕೆ ತಿರೆ ವಾಯು ಪಂಚಭೂತದ ಜಗಕೆ
ಚೈತನ್ಯ ನೆಮ್ಮದಿಯು ತುಂಬಿ ಬೆಳಗೆ

ಎಲ್ಲರಿಗೂ ನೆಮ್ಮದಿಯು ಎಲ್ಲೆಡೆಗು ನೆಮ್ಮದಿಯು
ಅಮರ ಶಾಂತಿಯ ದಿವ್ಯ ಭವ್ಯ ನೆಮ್ಮದಿಯು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...