ಹೊಸ ಹಾಡು

ಹಾಡೆಲೆ ಹೃದಯದ ಹಕ್ಕಿಯೆ ಹಾಡು
ನವ ಜೀವನ ಸುಮಧುರ ಗಾನ
ಕೊರಡು ಕೊನರುತಿದೆ ಚೆಲುವು ಹರಡುತಿದೆ
ಉದಿಸಲಿ ಚೇತನ ತಂತಾನ

ರಾತ್ರಿ ಸರಿಯುತಿದೆ ಉಷೆಯು ಬರುತಲಿದೆ
ಓಹೋ ಎಂಥಹ ಸುರ ಚೆಲುವು
ಇದನ್ನು ಕಾಣಲು ಉಂಡದ್ದಾಯಿತು
ಓ ಹಾ ಇರುಳಿನ ಕಡು ನೋವು

ಜಗವೆ ಸುಂದರಾ ಬಾಳು ಸುಂದರಾ
ಕಾಣೋ ನಗುತಿಹ ಸೃಷ್ಟಿಯನು
ನೀನೂ ಕೂಡಾ ಅದರ ಚೆಲುವಿನಲಿ
ಕೂಡುತ ಹಾಡೋ ತುಷ್ಟಿಯನು

ಕೋಶ ಕೀಟದೊಲು ಬಾಳಿದ್ದಿನ್ನೂ
ಸಾಕಾಗಿಲ್ಲವೆ ಮಹರಾಯ
ಚೆಲ್ಲುತ ಹೊದಿಕೆಯ ಮೇಲೆದ್ದೇಳು
ಸೊಬಗನು ಸವಿಯುವ ಬಾರಯ್ಯ

ಹೊತ್ತು ಮುಳುಗುವಾ ಅಂಜಿಕೆಯೇಕೆ
ಹಗಲನು ನಗುತಲೆ ಕಳೆಯೋಣ
ಕತ್ತಲಾದರೂ ರವಿಯು ಸಾಯುವನೆ
ಭೂಮಿಯ ಭ್ರಮೇಯೇ ತಾ ಕಾರಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮ್ಮನ ಆತಂಕಗಳು
Next post ಲಿಂಗಮ್ಮನ ವಚನಗಳು – ೬೦

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

cheap jordans|wholesale air max|wholesale jordans|wholesale jewelry|wholesale jerseys