ಸವಾಲು

ಶುಚಿರ್ಭೂತನಾಗಿ
ಗುಡಿಯ ಕಿವುಡು ದೇವರಿಗೆ
ಕೇಳಿಸಲೆಂದು ಗಂಟೆ ಬಡಿದು
ಕಲ್ಲಿಗೆ ತೆಂಗಿನ ಕಾಯಿ ಒಡೆದು
ಭಕ್ತಿಯ ಮಹಾಪೂರ
ಹರಿಸುವುದು ಬೇಡ
ಕತ್ತಲ ಕರ್ಮಗಳಿಗಾಗಿ
ಬೆಳಕಿನಲಿ ಪ್ರಾಯಶ್ಚಿತ್ತ
ಮಾಡಿಕೊಳ್ಳುವುದೂ ಬೇಡ

ಸುಮ್ಮನೇ ಇರುವುದಕ್ಕೆ ಬಾರದೆ ಬರಿದೆ
ಸುಮ್ಮನೆ ಎಂದರೆ ಸುಮ್ಮನೆ
ಗಾಳಿ ಬೀಸುವಂತೆ
ನೀರು ಹರಿಯುವಂತೆ
ಬೆಂಕಿ ಉರಿಯುವಂತೆ
ನೆಲವು ಬೆಳೆಸುವಂತೆ

ನೀನ್ಯಾಕೋ ನಿನ್ನ ಹಂಗ್ಯಾಕೊ
ನನ್ನ ಕೆಲಸದಿ ಮೈಮನ
ಮುಳುಗಿರೆ ಸಾಕೂ
ಎಂದು ಆ ದೇವರಿಗೆ ಸವಾಲು ಹಾಕು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪವೂ ನಿನ್ನದೆ, ಗಾಳಿಯೂ ನಿನ್ನದೆ
Next post ಲಿಂಗಮ್ಮನ ವಚನಗಳು – ೬೫

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

cheap jordans|wholesale air max|wholesale jordans|wholesale jewelry|wholesale jerseys