Home / ಕವನ / ಕವಿತೆ / ಗಂಟಲಲ್ಲಿ ಸಿಕ್ಕಿಕೊಂಡ ಹೊಟ್ಟೆ

ಗಂಟಲಲ್ಲಿ ಸಿಕ್ಕಿಕೊಂಡ ಹೊಟ್ಟೆ

ಇವರ ಡೊಳ್ಳು ಹೊಟ್ಟೆಗಳನೆಲ್ಲ
ನಗಾರಿ ಬಾರಿಸಬೇಕು ಒಡೆಯುವವರೆಗೆ
ಇವರ ಮುಖವಾಡಗಳ ಕಿತ್ತೆಸೆದು
ಇವರ ಕತ್ತೆ ಮುಖಗಳ
ಕತ್ತುಹಿಡಿದು ಹೊಲೆಗೇರಿಗಳ
ಕೊಳಚೆಗಳಲ್ಲದ್ದಬೇಕು
ಇವರು ಕಟ್ಟಿದ ಸಂಚುಕೋಟೆಗಳ
ನುಡಿಗುಂಡುಗಳಿಂದ ಒಡೆಯಬೇಕು
ಇವರು ಹಾಕಿದ ಲಕ್ಷ್ಮಣರೇಖೆಗಳನೆಲ್ಲ
ಅವಲಕ್ಷಣವಾಗಿ ಅಳಿಸಿ
ಸೀಮೋಲ್ಲಂಘನ ಮಾಡಬೇಕು

ಇವರ ಹೂದೋಟಗಳಲ್ಲೆಲ್ಲ
ಇವರ ತೊಗಲು ಮಾಂಸಗಳ
ಕಿತ್ತು ಹಾಕಿ ಇವರಸ್ಥಿಪಂಜರಗಳು
ಅದೆಷ್ಟು ಅಸ್ಥಿರ ಎಂಬುದ
ಜಗತ್ತಿಗೇ ತೋರಿಸಬೇಕು;
ಕಂಡದ್ದನ್ನೆಲ್ಲಾ ಕೆಂಡಕಾರಿ ಸುಡಬೇಕು,

ಇವರ ಮಕಮಲ್ಲ ಬಟ್ಟೆಗಳ ಕಳಚಿ ಒಗೆದು
ಮಣ್ಣಿನುಡಿಗೆಗಳನುಡಿಸಿ
ದುಡಿಯಹಚ್ಚಬೇಕು,
ಇವನೆಲ್ಲ ಬೇಕು ಮಾಡಲು
ಘೋಷಣೆ ಕೂಗಲು ಬಾಯ್ದೆರೆದಾಗ
ಗಂಟಲಲ್ಲಿ ಸಿಕ್ಕಿಕೊಂಡು ಹೊಟ್ಟೆ
ಮಾತುಗಳನೆಲ್ಲ ನುಂಗಿ
ಬೇತಾಳದಂತೆ ಮುಂದೆ ನಿಂತಿತು
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...