Home / ಕವನ / ಕವಿತೆ / ಉದ್ಧಾರ

ಉದ್ಧಾರ

ಯಾವ ಬೋಧೆಯಿಂದಿವನು ಬೋಧಿ ಸತ್ವನಾದಾನು?
ಯಾವ ಓದಿನಿಂದಿವನು ವಾದಾತೀತನಾದಾನು?
ಯಾವ ಚಿಲುಮೆಯಿಂದ ಇವನ ಕೊರಡು ಚಿಗುರೀತು?
ಯಾವ ಒಲುಮೆಯಿಂದ ಇವನಿಗೆ ಬಲ ಬಂದೀತು?
ಯಾವ ದಾರಿದೀಪದಿಂದ ಇವನ ಕಗ್ಗಾಡು ಬೆಳಗೀತು?
ಯಾವ ಸಾಧನೆಯಿಂದ ಇವನ ಬಾಧಕ ಭಂಗವಾದೀತು?
ಯಾವ ದುಡಿತದಿಂದ ಇವನ ದುಗುಡ ದೂರಾದೀತು?
ಯಾವ ಏಕಾಂತದಲ್ಲಿ ಇವನ ಮಂಗ ಸಂಗ ಕಳೆದೀತು?
ಯಾವ ಎಳೆಯಿಂದ ಇವನ ಹಗ್ಗ ಬಿಗಿಯಾದೀತು?
ಯಾವ ಕಳೆಯಿಂದ ಇವನ ಮರ ಅಮರವಾದೀತು?
ಯಾವ ಬೆಳೆಯಿಂದ ಇವನ ಮನೆ ತುಂಬೀತು?
ಯಾವ ಕರ್ಮದಿಂದ ಇವನ ಧರ್ಮ ರೂಪು ತೋರೀತು?
ಯಾವ ಮರ್ಮದಿಂದ ಇವನ ಮಾನ ಉಳಿದೀತು?
ಯಾವ ಗುರುವಿನಿಂದ ಇವನ ಗೌರವ ಮೆರೆದೀತು?
ಯಾವ ಕೈಯಿಂದ ಇವನ ಕಾಲು ನಡೆದಾವು?
ಯಾವ ಬೆಂಕಿಯಲ್ಲಿ ಇವನ ಕಾವು ಕುದಿದು ಪಕ್ವವಾದೀತು?
ಯಾವ ಬೇವಿಂದ ಇವನ ಬದುಕು ಸಮರಸವಾದೀತು?
ಯಾವ ವಿಷದಿಂದ ಇವನ ವಿಷಯ ತೀರೀತು?
ಯಾವ ಚಿಕ್ಕೆಯಿಂದ ಇವನ ಚೊಕ್ಕತನ ಮಿನುಗೀತು?
ಯಾವ ಬಿಕ್ಕೆಯಿಂದ ಇವನ ಜೋಳಿಗೆ ತುಂಬೀತು?
ಯಾವ ಹಂಗಿನಿಂದ ಇವನ ಹಗರಣ ಹಗುರಾದೀತು?
ಯಾವ ಪರೀಕ್ಷೆಯಲ್ಲಿ ಇವನ ಪರುಷ ದೊರೆತೀತು?
ಯಾವ ಹೊತ್ತಿಗೆಯಲ್ಲಿ ಇವನ ಗೊತ್ತುಗುರಿ ಸಿಕ್ಕೀತು?
ಯಾವ ಹೂವಿಂದ ಇವನ ಹೃದಯವರಳೀತು?
ಯಾವ ಭಾವದಿಂದ ಇವನ ಬೇರು ಬಲಿತೀತು?
ಯಾವ ಸೂಜಿಯಿಂದ ಇವನ ಗುಳ್ಳೆ ಒಡೆದೀತು?
ಯಾವ ಸಂದಿನಿಂದ ಇವನ ಬಂಧಿತ ಸತ್ವ ಚಿಮ್ಮೀತು?
ಯಾವ ಅನ್ನ ನೀರಿನಿಂದ ಇವನ ಒಡಲುರಿಯಾರೀತು?
ಯಾವ ಚುಚ್ಚಿನಿಂದ ಇವನ ರೊಚ್ಚು ಉರಿದೆದ್ದೀತು?
ಯಾವ ಶಸ್ತ್ರದಿಂದ ಇವನ ಸಂಶಯ ಛಿನ್ನವಾದೀತು?
ಯಾವ ಶಾಸ್ತ್ರದಿಂದ ಇವನ ಸ್ತರವು ವಿಸ್ತಾರವಾದೀತು?

ಇವನೊಳಗು ಮೊಳೆತು ಮೊಳಗದೆ
ತಿಳಿದು ತೊಳಗದೆ
ಗುಟ್ಟು ಗಟ್ಟಿಗೊಳ್ಳದೆ
ಇವನ ಯಾರುದ್ಧರಿಸಬೇಕು?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...