Home / ಕವನ / ಕವಿತೆ / ಉದ್ಧಾರ

ಉದ್ಧಾರ

ಯಾವ ಬೋಧೆಯಿಂದಿವನು ಬೋಧಿ ಸತ್ವನಾದಾನು?
ಯಾವ ಓದಿನಿಂದಿವನು ವಾದಾತೀತನಾದಾನು?
ಯಾವ ಚಿಲುಮೆಯಿಂದ ಇವನ ಕೊರಡು ಚಿಗುರೀತು?
ಯಾವ ಒಲುಮೆಯಿಂದ ಇವನಿಗೆ ಬಲ ಬಂದೀತು?
ಯಾವ ದಾರಿದೀಪದಿಂದ ಇವನ ಕಗ್ಗಾಡು ಬೆಳಗೀತು?
ಯಾವ ಸಾಧನೆಯಿಂದ ಇವನ ಬಾಧಕ ಭಂಗವಾದೀತು?
ಯಾವ ದುಡಿತದಿಂದ ಇವನ ದುಗುಡ ದೂರಾದೀತು?
ಯಾವ ಏಕಾಂತದಲ್ಲಿ ಇವನ ಮಂಗ ಸಂಗ ಕಳೆದೀತು?
ಯಾವ ಎಳೆಯಿಂದ ಇವನ ಹಗ್ಗ ಬಿಗಿಯಾದೀತು?
ಯಾವ ಕಳೆಯಿಂದ ಇವನ ಮರ ಅಮರವಾದೀತು?
ಯಾವ ಬೆಳೆಯಿಂದ ಇವನ ಮನೆ ತುಂಬೀತು?
ಯಾವ ಕರ್ಮದಿಂದ ಇವನ ಧರ್ಮ ರೂಪು ತೋರೀತು?
ಯಾವ ಮರ್ಮದಿಂದ ಇವನ ಮಾನ ಉಳಿದೀತು?
ಯಾವ ಗುರುವಿನಿಂದ ಇವನ ಗೌರವ ಮೆರೆದೀತು?
ಯಾವ ಕೈಯಿಂದ ಇವನ ಕಾಲು ನಡೆದಾವು?
ಯಾವ ಬೆಂಕಿಯಲ್ಲಿ ಇವನ ಕಾವು ಕುದಿದು ಪಕ್ವವಾದೀತು?
ಯಾವ ಬೇವಿಂದ ಇವನ ಬದುಕು ಸಮರಸವಾದೀತು?
ಯಾವ ವಿಷದಿಂದ ಇವನ ವಿಷಯ ತೀರೀತು?
ಯಾವ ಚಿಕ್ಕೆಯಿಂದ ಇವನ ಚೊಕ್ಕತನ ಮಿನುಗೀತು?
ಯಾವ ಬಿಕ್ಕೆಯಿಂದ ಇವನ ಜೋಳಿಗೆ ತುಂಬೀತು?
ಯಾವ ಹಂಗಿನಿಂದ ಇವನ ಹಗರಣ ಹಗುರಾದೀತು?
ಯಾವ ಪರೀಕ್ಷೆಯಲ್ಲಿ ಇವನ ಪರುಷ ದೊರೆತೀತು?
ಯಾವ ಹೊತ್ತಿಗೆಯಲ್ಲಿ ಇವನ ಗೊತ್ತುಗುರಿ ಸಿಕ್ಕೀತು?
ಯಾವ ಹೂವಿಂದ ಇವನ ಹೃದಯವರಳೀತು?
ಯಾವ ಭಾವದಿಂದ ಇವನ ಬೇರು ಬಲಿತೀತು?
ಯಾವ ಸೂಜಿಯಿಂದ ಇವನ ಗುಳ್ಳೆ ಒಡೆದೀತು?
ಯಾವ ಸಂದಿನಿಂದ ಇವನ ಬಂಧಿತ ಸತ್ವ ಚಿಮ್ಮೀತು?
ಯಾವ ಅನ್ನ ನೀರಿನಿಂದ ಇವನ ಒಡಲುರಿಯಾರೀತು?
ಯಾವ ಚುಚ್ಚಿನಿಂದ ಇವನ ರೊಚ್ಚು ಉರಿದೆದ್ದೀತು?
ಯಾವ ಶಸ್ತ್ರದಿಂದ ಇವನ ಸಂಶಯ ಛಿನ್ನವಾದೀತು?
ಯಾವ ಶಾಸ್ತ್ರದಿಂದ ಇವನ ಸ್ತರವು ವಿಸ್ತಾರವಾದೀತು?

ಇವನೊಳಗು ಮೊಳೆತು ಮೊಳಗದೆ
ತಿಳಿದು ತೊಳಗದೆ
ಗುಟ್ಟು ಗಟ್ಟಿಗೊಳ್ಳದೆ
ಇವನ ಯಾರುದ್ಧರಿಸಬೇಕು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...