Home / ಕವನ / ಕವಿತೆ / ಉದ್ಧಾರ

ಉದ್ಧಾರ

ಯಾವ ಬೋಧೆಯಿಂದಿವನು ಬೋಧಿ ಸತ್ವನಾದಾನು?
ಯಾವ ಓದಿನಿಂದಿವನು ವಾದಾತೀತನಾದಾನು?
ಯಾವ ಚಿಲುಮೆಯಿಂದ ಇವನ ಕೊರಡು ಚಿಗುರೀತು?
ಯಾವ ಒಲುಮೆಯಿಂದ ಇವನಿಗೆ ಬಲ ಬಂದೀತು?
ಯಾವ ದಾರಿದೀಪದಿಂದ ಇವನ ಕಗ್ಗಾಡು ಬೆಳಗೀತು?
ಯಾವ ಸಾಧನೆಯಿಂದ ಇವನ ಬಾಧಕ ಭಂಗವಾದೀತು?
ಯಾವ ದುಡಿತದಿಂದ ಇವನ ದುಗುಡ ದೂರಾದೀತು?
ಯಾವ ಏಕಾಂತದಲ್ಲಿ ಇವನ ಮಂಗ ಸಂಗ ಕಳೆದೀತು?
ಯಾವ ಎಳೆಯಿಂದ ಇವನ ಹಗ್ಗ ಬಿಗಿಯಾದೀತು?
ಯಾವ ಕಳೆಯಿಂದ ಇವನ ಮರ ಅಮರವಾದೀತು?
ಯಾವ ಬೆಳೆಯಿಂದ ಇವನ ಮನೆ ತುಂಬೀತು?
ಯಾವ ಕರ್ಮದಿಂದ ಇವನ ಧರ್ಮ ರೂಪು ತೋರೀತು?
ಯಾವ ಮರ್ಮದಿಂದ ಇವನ ಮಾನ ಉಳಿದೀತು?
ಯಾವ ಗುರುವಿನಿಂದ ಇವನ ಗೌರವ ಮೆರೆದೀತು?
ಯಾವ ಕೈಯಿಂದ ಇವನ ಕಾಲು ನಡೆದಾವು?
ಯಾವ ಬೆಂಕಿಯಲ್ಲಿ ಇವನ ಕಾವು ಕುದಿದು ಪಕ್ವವಾದೀತು?
ಯಾವ ಬೇವಿಂದ ಇವನ ಬದುಕು ಸಮರಸವಾದೀತು?
ಯಾವ ವಿಷದಿಂದ ಇವನ ವಿಷಯ ತೀರೀತು?
ಯಾವ ಚಿಕ್ಕೆಯಿಂದ ಇವನ ಚೊಕ್ಕತನ ಮಿನುಗೀತು?
ಯಾವ ಬಿಕ್ಕೆಯಿಂದ ಇವನ ಜೋಳಿಗೆ ತುಂಬೀತು?
ಯಾವ ಹಂಗಿನಿಂದ ಇವನ ಹಗರಣ ಹಗುರಾದೀತು?
ಯಾವ ಪರೀಕ್ಷೆಯಲ್ಲಿ ಇವನ ಪರುಷ ದೊರೆತೀತು?
ಯಾವ ಹೊತ್ತಿಗೆಯಲ್ಲಿ ಇವನ ಗೊತ್ತುಗುರಿ ಸಿಕ್ಕೀತು?
ಯಾವ ಹೂವಿಂದ ಇವನ ಹೃದಯವರಳೀತು?
ಯಾವ ಭಾವದಿಂದ ಇವನ ಬೇರು ಬಲಿತೀತು?
ಯಾವ ಸೂಜಿಯಿಂದ ಇವನ ಗುಳ್ಳೆ ಒಡೆದೀತು?
ಯಾವ ಸಂದಿನಿಂದ ಇವನ ಬಂಧಿತ ಸತ್ವ ಚಿಮ್ಮೀತು?
ಯಾವ ಅನ್ನ ನೀರಿನಿಂದ ಇವನ ಒಡಲುರಿಯಾರೀತು?
ಯಾವ ಚುಚ್ಚಿನಿಂದ ಇವನ ರೊಚ್ಚು ಉರಿದೆದ್ದೀತು?
ಯಾವ ಶಸ್ತ್ರದಿಂದ ಇವನ ಸಂಶಯ ಛಿನ್ನವಾದೀತು?
ಯಾವ ಶಾಸ್ತ್ರದಿಂದ ಇವನ ಸ್ತರವು ವಿಸ್ತಾರವಾದೀತು?

ಇವನೊಳಗು ಮೊಳೆತು ಮೊಳಗದೆ
ತಿಳಿದು ತೊಳಗದೆ
ಗುಟ್ಟು ಗಟ್ಟಿಗೊಳ್ಳದೆ
ಇವನ ಯಾರುದ್ಧರಿಸಬೇಕು?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...