Home / ಕವನ / ಕವಿತೆ / ದೇಶಾವರಿ

ದೇಶಾವರಿ

ಬರ್ರಿ ಹೀಗೇ ದೇಶಾವರಿ, ಮಾತಾಡಾಣ,
ನಿಮ್ಮ ಕಡೆ ಮಳೆ ಬೆಳಿ ಹೆಂಗೆ? ಅಷ್ಟೇ! ಎಲ್ಲಾ ಕಡಿಗೂ
ದೇಶಾದಾಗೆಷ್ಟು ಪಾರ್ಟಿಗಳನಾ ಇರಲಿ
ನಮ್ಮೂರಗೆಳ್ಡೆ ಪಾರ್ಟಿ ನೋಡ್ರಿ ಎಂದೆಂದಿಗೂ,
ನಿಮ್ಮೂರಾನ ಪಾರ್ಟಿಗಳು ಎಷ್ಟು ಮನಿ ಮುರದುವು?
ಎಷ್ಟು ಬಣವಿ ಸುಟ್ಟು ಎಷ್ಟು ಪಂಪಸೆಟ್ ಕಳವು ಮಾಡಿಸಿದುವು?
ಎಷ್ಟು ಕಳವು ಮಾಡಿಸಿದುವು, ಎಷ್ಟು ತಾಳಿ ಕಿತ್ತವು?
ಎಷ್ಟು ಮನಿ ದೀಪಾ ತಗದುವು?

ನಿಮ್ಮೂರ ದೇವ್ರುಗಳು ಎಷ್ಟು ಸಾಲಾ ಮಾಡಿಸಿದುವು?
ಹಳೆ ಬಾವಿಗಳಾಗೆಷ್ಟು ಹಳಸು ಗ್ವಾತ ಹಾಕಿದುವು?
ಜಾತಿ ಭೇದದ ಬೇರಿಗೆಷ್ಟು ನೀರು ಹಾಕಿದುವು?
ನಿಮ್ಮೂರ ರಾಕ್ಷಸರು ಎಷ್ಟು ಬಾಳ್ವೆ ಕೆಡಿಸಿದರು?
ಎಷ್ಟು ರಂಡೇರ ಎಷ್ಟು ಗರ್ಭಪಾತ ಮಾಡಿಸಿದುವು?
ಹೊಸಗಾಳಿಗಳಾಗೆ ಎಷ್ಟು ತೂರಿಕೊಂಡು ಗೂಳ್ಯಾಗಿ ಮೆರದರು?
ಹುಚ್ಚು ಮುಂಡೇ ಮದುವ್ಯಾಗೆಷ್ಟು ಜಾಣರುಂಡರು?

ಎಷ್ಟು ಹರೇವುಗಳು ಹದ್ದುಮೀರಿ ಓಡಿದುವು?
ಎಷ್ಟು ಹಾದರಾ ಬಾವ್ಯಾಗೆ ತೇಲಿದುವು? ತಿಪ್ಯಾಗೆ ಹೂಳಿದುವು?
ಎಷ್ಟು ಮಣಕಾ ಹಳೇ ಎತ್ತುಗಳ ಕಾಲಾಗೆ ಬಿದ್ವು?

ಇನ್ನು ದೇಶದ ದೇಶಾವರೀನಾ!
ಊರುಡಾಳರ ಆಡಳಿತಾ, ಕಳ್ಳ ಕದೀಮರ ಮೆರೆತಾ
ಹಸಗೆಟ್ಟ ದೇಶದ ದೇಹಸ್ಥಿತಿಗೆ ಹೊಸ ಕಂತ್ರಿ ಔಷಧ,
ದಿನದಿನಕೆ ರೋಗ ಉಲ್ಬಣ, ದೇಹ ಬರೀ ಮೂಳೆ ತೊಗಲು
ಕೆಲವು ಕಡಿಗೆ ಹಣದುಬ್ಬರದ ಕೀವು ಬಾವು

ಪೊಳ್ಳು ಆಶ್ವಾಸನಗಳ ಗುಳ್ಳೆ ತೇಲ್ತಾವೆ,
ಐದು ವರ್ಷದಾಗೆಷ್ಟು ಬೇಕೋ ಅಷ್ಟು ಕಾರಭಾರ
ಅವರ ಮನೆತನ ಕಳಬಳ್ಳೆಲ್ಲ ನಾಕೈದು ತಲೆಮಾರ ಹಾರಭಾರಾ
ಇವತ್ತು ಕೈಕೈ ಮಿಲಾಪು ನಾಳೆ ಕುತ್ತಿಗೆ ಕುತ್ತಿಗೆ ರೋಪು
ಹೀಂಗೇ ನಾಟಕಾ ನಡದಾದ ಸ್ವಾಮೀ!
ದೇಶದಾಗ ದೇಶ ಉಳಿದಿಲ್ಲ ಬರೀ ದೇಶಾವರೀನೇ ನಡದಾದ
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...