Home / ಕವನ / ಕವಿತೆ / ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ
ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ||

ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ
ಕರಿತಾರೆ ಬರ್ರೆವ್ವ ಕೂಡಿ ||ಅ.ಪ.||

ದೇಹವೆಂಬುವ ಬೀಸುಕಲ್ಲು ಶಿವಪುರದಾಗ
ಉಪ್ಪಾರನ ಕೈಲೆ ಹೊಡಿಸಿ
ಮೇಲೆ ಗಂಟಲು ಮ್ಯಾಗಿನ ಪಾಳಿಗೆ
ನಡುಮಧ್ಯದಿ ಬಾಯಿ ತೆಗಸಿ
ಕೆಳಗಿನ ಪಾಳಿಗೆ ಮಲಮೂತ್ರ ಬಿಡುತಿಹ
ಅಸವಲ್ಲದೊಂದ ತೂತ ತಗಸಿ
ತಕ್ಕಂಥ ಗೂಟವು ಕಾಯ ಮರದ ಮ್ಯಾಗ
ಸಾಗವಾನಿಯ ಕಟಗಿಯ ತರಿಸಿ
ಸವ್ವಾನೂರು ವರ್ಷ ಬಾಳುವ ಗೂಟಕ್ಕೆ
ಮೇಲೊಂದ ಅಣಸನು ಜಡಿಸಿ
ನಾನು ಬೇಕಾಗಿ ಬೀಸೇನೇ ಕಲ್ಲು ತರಿಸಿದ್ದೆನೇ
ಸೂತ್ರ ಎಂಬುವ ಚಿತ್ರ ತೆಗಸಿದ್ದೇನೇ
ವಾಯು ದೇಹವೆಂಬುವ ಪಿರಿಕಿ ಹಾಕಿದ್ದೇನೇ
ಇಂಥಾ ಕಲ್ಲು ಸಮತೋಲು ನಿಜಮನವೆಂಬ ಜಾಗದಾಗ ನಡಸಿದ್ದೆನೇ
ನಾರಿ ಕರಿಯುವನೇ ನಾರೇರು ಎಲ್ಲಾರು ಬರ್ರೆವ್ವ ಭದ್ರ್ಯಾರು ಕೂಡಿ ||೧||

ಅಬ್ಬರೆಂಬುವ ಗೋದಿ ಕಡಲಿಯ ತಂದು
ತನುವೆಂಬಂತಸ್ತದಿ ತೋಯಿಸಿ
ಮನದ ಮೈಲಿಗೆಯೆಂಬ ಮ್ಯಾಗಿನ ತೌಡು
ಅನುವಿಂದ ಒಳ್ಳಾಗ ಕುಟ್ಟಿಸಿ ತೆಗದು
ಸುಜ್ಞಾನವೆಂಬುವ ಧೂಳವ ಕೇರಿಸಿ
ಬುದ್ಧಿಯೆಂಬುವ ಬುಟ್ಟಿಯನು ತುಂಬಿಸಿ
ಧರ್ಮಯೆಂಬುವಂಥಾ ಬಲಗೈಲೆ
ಒಂದೊಂದು ಹಿಡಿ ಹಿಡಿ ಮುಕ್ಕನೆ ನಾ ಹಾಕಿಸಿ
ಕರ್ಮವೆಂಬುವಂಥಾ ಎಡಗೈಲೆ
ತಿರುತಿರುವಿ ಸಣ್ಣಾಗಿ ಮುಕ್ಕನುರಿಸಿ
ತ್ರಿಗುಣೆಂಬ ಹಿಟ್ಟನು ಗೂಡಿಸಿದ್ದೆನೇ
ಒಂಬತ್ತು ತೂತಿನ ಸಾಣಿಗೀಲೆ ಸಾಣಿಸಿದ್ದೆನೇ
ಇಂಥಾ ಹಿಟ್ಟು ಬಚ್ಚಿಟ್ಟು
ಆತ್ಮವೆಂಬುವ ಅಮೃತದ ಗಡಿಗಿ ತುಂಬಿಸಿದ್ದೆನೇ
ತಾಯಿ ಮಾಯಿ ತಾಯವ್ವನ ಕರಕೊಂಡು ನಡಿರೆವ್ವ ಅಡಗೀಯ ಮಾಡೀ ||೨||

ಅನುಭವ ತನುಭವ ಚಿನುಮಯವೆಂಬುವ ಮೂರು ಒಲಿಯ ಗುಂಡು ಹೂಡಿ
ಕಾಮಕ್ರೋಧವೆಂಬ ಕಾಡಕಟ್ಟಿಗಿ ಸುಟ್ಟು ಬೇಗ ಒಲಿಯ ಪುಟಮಾಡಿ
ಪಂಚತತ್ವದಿಂದ ಪಕ್ವಾನ್ನ ಮಾಡಿ
ಗಡಿಗೆ ಇಳುವಿದ್ದೇನ್ರೇ ಪಟ್ಟಿ ತೀಡೀದ್ದೇನ್ರೇ
ಸಪ್ತಭೂತಂಗಳಿಗೆ ಗುಪ್ತ ಅಡಗಿಯ ಮಾಡಿ
ಹೊತ್ತಿದ್ದನ್ನವನು ನೀಡಿ
ಅನ್ನವು ತೀರಿತು ಗಡಿಗೆಯು ಒಡದೀತು
ಒಲಿಗುಂಡು ಬಿತ್ತ್ರೆವ್ವ ಒಂದು ಕಡಿ
ಕಾಳು ಕಡಿಗಾಯಿತು ಕಲ್ಲು ಇಲ್ಲುಳದಿತು
ಇನ್ನೆಲ್ಲಿ ಬಂದೀತು ಭೂಮಿ ಮೂಡಿ ನಾನು
ಕಾಳು ಹೋದಿಂದೆ ಮ್ಯಾಳ ಮುರಿದು ಗೀಳಾದೆ
ಸಾಧು ಸಾಧಕರೊಳು ವ್ಯಾಳಗಳದೆ
ಸುಳ್ಳೇ ಸಂಸಾರದೊಳು ಬಿದ್ದೆ ಪಾಪ ಹೊದ್ದೆ
ಪೊಡವಿಪ ಶಿಶುನಾಳಧೀಶನ ದಯದಿಂದ
ಕಡೆಗೆ ನಾ ಮುಕ್ತಿಯ ಕಂಡೇ ||೩||
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...